ADVERTISEMENT

ಶೃಂಗೇರಿಯಲ್ಲಿ ಎಚ್.ಡಿ.ರೇವಣ್ಣ ವಿಶೇಷ ಪೂಜೆ

​ಪ್ರಜಾವಾಣಿ ವಾರ್ತೆ
Published 9 ಜುಲೈ 2019, 13:30 IST
Last Updated 9 ಜುಲೈ 2019, 13:30 IST
ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ ಮಂಗಳವಾರ ಶಾರದಾ ಮಠಕ್ಕೆ ಭೇಟಿ ನೀಡಿದರು.
ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ ಮಂಗಳವಾರ ಶಾರದಾ ಮಠಕ್ಕೆ ಭೇಟಿ ನೀಡಿದರು.   

ಶೃಂಗೇರಿ: ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಮಂಗಳವಾರ ಬೆಳಿಗ್ಗೆ ಇಲ್ಲಿನ ಶಾರದಾ ಮಠಕ್ಕೆ ಭೇಟಿ ನೀಡಿ, ಶಾರದೆಗೆ ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ನರಸಿಂಹವನದ ಗುರುನಿವಾಸಕ್ಕೆ ತೆರಳಿ ಭಾರತೀತೀರ್ಥ ಸ್ವಾಮೀಜಿ ಹಾಗೂ ವಿಧುಶೇಖರಭಾರತೀ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದರು.

ತೋರಣಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ 5 ಇಡುಗಾಯಿನ್ನು ಒಡೆದರು. ನಂತರ ಕಾಳಿಕಾಂಬ, ಮಲಹಾನೀಕಾರೇಶ್ವರ, ದುರ್ಗದೇವಸ್ಥಾನ, ಶಕ್ತಿಗಣಪತಿ, ಸುಬ್ರಹ್ಮಣ್ಯ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು.

ADVERTISEMENT

ಮೈತ್ರಿಸರ್ಕಾರ ಪತನದತ್ತ ಸಾಗುತ್ತಿರುವ ಬೆನ್ನಲ್ಲೆ ಎಚ್.ಡಿ.ರೇವಣ್ಣ ಅವರ ಶೃಂಗೇರಿ ಭೇಟಿ ಕುತೂಹಲ ಕೆರಳಿಸಿದೆ.

ಜೆಡಿಎಸ್ ಯುವ ಕ್ಷೇತ್ರಾಧ್ಯಕ್ಷ ಭರತ್ ಗಿಣಿಕಲ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.