ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದ ವಿವಿಧೆಡೆ ಮಳೆಯಾಗುತ್ತಿದೆ. ಕೊಪ್ಪ, ಕಳಸ ಭಾಗದಲ್ಲಿ ಧಾರಾಕಾರವಾಗಿ ಮಳೆಯಾಗಿದೆ.
ಕೊಪ್ಪದಲ್ಲಿ ರಸ್ತೆ ಬದಿಯ ಅಂಗಡಿ, ಮಳಿಗೆಗಳಿಗೆ ನೀರು ನುಗ್ಗಿದೆ. ಕಳಸ ಭಾಗದಲ್ಲಿ ತೋಟ, ಜಮೀನುಗಳಲ್ಲಿ ನೀರು ಹರಿಯುತ್ತಿದೆ.
ಚಿಕ್ಕಮಗಳೂರು ಗಿರಿಶ್ರೇಣಿ ಭಾಗದಲ್ಲಿ ಸಾಧಾರಣ ಮಳೆಯಾಗಿದೆ. ರಸ್ತೆಗಳ ಗುಂಡಿಗಳಲ್ಲಿ ನೀರು ತುಂಬಿಕೊಂಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.