ಚಿಕ್ಕಮಗಳೂರು: ಜಿಲ್ಲೆಯ ಎನ್.ಆರ್. ಪುರದ ಜೀವನ್ ಜ್ಯೋತಿ ಶಾಲೆಯ 11 ಮಂದಿಗೆ ಶುಕ್ರವಾರ ಕೋವಿಡ್ ದೃಢಪಟ್ಟಿದೆ.
10 ವಿದ್ಯಾರ್ಥಿಗಳು ಮತ್ತು ಒಬ್ಬರು ಶಿಕ್ಷಕರಿಗೆ ಸೋಂಕು ಪತ್ತೆಯಾಗಿದೆ. ಶಾಲೆಯನ್ನು ಸೀಲ್ ಡೌನ್ ಮಾಡಲಾಗಿದೆ.
‘ಶಾಲೆಯ ಒಬ್ಬ ವಿದ್ಯಾರ್ಥಿಗೆ ಮೂರು ದಿನಗಳ ಹಿಂದೆ ಕೋವಿಡ್ ದೃಢಪಟ್ಟಿತ್ತು. ಹೀಗಾಗಿ, ಶಿಕ್ಷಕರು, ಸಿಬ್ಬಂದಿ, ವಿದ್ಯಾರ್ಥಿಗಳು ಸಹಿತ 470 ಮಂದಿ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳಿಸಲಾಗಿತ್ತು. ಈ ಪೈಕಿ 11 ಮಂದಿಗೆ ಸೋಂಕು ಪತ್ತೆಯಾಗಿದೆ’ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಎಚ್.ಕೆ.ಮಂಜುನಾಥ್ ‘ಪ್ರಜಾವಾಣಿ’ಗೆ ತಿಳಿಸಿದರು.
‘ಎಲ್ಲರೂ ಲಕ್ಷಣರಹಿತ ಸೋಂಕಿತರು. ಮನೆಯಲ್ಲಿ ಏಕಾಂತ ವಾಸದಲ್ಲಿ ಇರಲು ವ್ಯವಸ್ಥೆ ಮಾಡಲಾಗಿದೆ. ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ಅವರು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.