ADVERTISEMENT

ಚಿಕ್ಕಮಗಳೂರಿನ ಆಭರಣ ಅಂಗಡಿ: ದರೋಡೆಗೆ ಯತ್ನ, ಗುಂಡು ಹಾರಿಸಿ ದುಷ್ಕರ್ಮಿಗಳು ಪರಾರಿ

​ಪ್ರಜಾವಾಣಿ ವಾರ್ತೆ
Published 11 ಜುಲೈ 2020, 7:57 IST
Last Updated 11 ಜುಲೈ 2020, 7:57 IST
ಆಭರಣ ಅಂಗಡಿ
ಆಭರಣ ಅಂಗಡಿ   

ಚಿಕ್ಕಮಗಳೂರು:ನಗರದ ಎಂ.ಜಿ.ರಸ್ತೆಯ ಕೇಸರಿ ಜ್ಯೂವೆಲರ್ಸ್‌ಹಾಡಹಗಲೇ ಮೂವರು ದುಷ್ಕರ್ಮಿಗಳು ನುಗ್ಗಿ ದರೋಡೆಗೆ ಯತ್ನಿಸಿ, ಮೂರು ಗುಂಡು ಹಾರಿಸಿ ಬೈಕಿನಲ್ಲಿ ಪರಾರಿಯಾಗಿದ್ದಾರೆ.

ಬೆಳ್ಳಿಗೆ 11.25ರ ಈ ಘಟನೆ ನಡೆದಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ,ಅಂಗಡಿ ಮಾಲೀಕ ಜಯಪ್ರಕಾಶ್ ಅವರಿಗೆ ಗಾಜು ತಗುಲಿ ಗಾಯವಾಗಿದೆ.

'ಮೂವರು ಪಲ್ಸರ್ ಬೈಕಿನಲ್ಲಿ ಬಂದು ದರೋಡೆಗೆ ಯತ್ನಿಸಿ, ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಮೂರು ಗುಂಡು ಹಾರಿಸಿದ್ದಾರೆ. ಅಂಗಡಿ ಮಾಲೀಕ ಜಯಪ್ರಕಾಶ ಅವರಿಗೆ ಗಾಜು ತಗುಲಿದ್ದುಗಾಯವಾಗಿದೆ' ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ.ಹಾಕೆ ತಿಳಿಸಿದ್ದಾರೆ.

'ಮೂವರ ಪೈಕಿ ಒಬ್ಬ ಹೆಲ್ಮೆಟ್ , ಇಬ್ಬರು ಮಾಸ್ಕ್ ಧರಿಸಿದ್ದರು ಎಂದು ಅಂಗಡಿಯವರು ಹೇಳಿದ್ದಾರೆ. ಮಳಿಗೆಯಲ್ಲಿನ ಸಿ.ಸಿ ಟಿವಿ ಕ್ಯಾಮೆರಾ ಪೂಟೇಜ್ ಪಡೆದುಕೊಂಡಿದ್ದೇವೆ' ಎಂದು ಪೊಲೀಸರುತಿಳಿಸಿದ್ದಾರೆ.

ADVERTISEMENT

ದುಷ್ಕರ್ಮಿಗಳ ಪತ್ತೆಗೆ ತಲಾಶ್ ಶುರುವಾಗಿದ್ದು,ತಂಡ ರಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.