ADVERTISEMENT

ಕೋಟಿ ಕಂಠ ಗಾಯನ: ಹೆಜ್ಜೆ ಹಾಕಿದ ಸಿ.ಟಿ.ರವಿ, ಕಾಫಿನಾಡು ಚಂದು

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2022, 8:23 IST
Last Updated 28 ಅಕ್ಟೋಬರ್ 2022, 8:23 IST
ಕನ್ನಡ ಹಾಡಿಗೆ ಕಾಫಿನಾಡು ಚಂದು ನೃತ್ಯ
ಕನ್ನಡ ಹಾಡಿಗೆ ಕಾಫಿನಾಡು ಚಂದು ನೃತ್ಯ   

ಚಿಕ್ಕಮಗಳೂರು: ನಗರದ ಜಿಲ್ಲಾ ಆಟದ ಮೈದಾನದಲ್ಲಿ ಕೋಟಿ ಕಂಠ ಗಾಯನ, ನಾಡಪ್ರಭು ಕೆಂಪೇಗೌಡ ಅವರ 108 ಅಡಿಯ ಕಂಚಿನ ಪ್ರತಿಮೆ ಅನಾವರಣ ನಿಟ್ಟಿನಲ್ಲಿ ಮೃತ್ತಿಕೆ (ಮಣ್ಣು) ಸಂಗ್ರಹ ಅಭಿಯಾನದ ರಥಕ್ಕೆ ಚಾಲನೆ ನೀಡಲಾಯಿತು.

ಕೋಟಿ ಕಂಠ ಗಾಯನದಲ್ಲಿ 'ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು...' ಹಾಡಿಗೆ ಶಾಸಕ ಸಿ.ಟಿ.ರವಿ, ಕಾಫಿನಾಡು ಚಂದು ಇತರರು ಹೆಜ್ಜೆ ಹಾಕಿದರು. ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ (ಬೈರತಿ), ಜಿಲ್ಲಾಧಿಕಾರಿ ಕೆ.ಎನ್.ರಮೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT