ಕಾರ್ಕಳ: ತಾಲ್ಲೂಕಿನ ಬೆಳ್ಮಣ್ ರೋಟರಿ ಕ್ಲಬ್, ವಿಶ್ವ ಹಿಂದೂ ಪರಿಷತ್, ಬಜರಂಗ ದಳ ಬೆಳ್ಮಣ್ಣು ವಲಯ ಹಾಗೂ ರಕ್ತನಿಧಿ ಸಂಚಯ ಉಡುಪಿ ಇವುಗಳ ಆಶ್ರಯದಲ್ಲಿ ಮುಹೂರ್ತ ಸಭಾಂಗಣದಲ್ಲಿ ರಕ್ತದಾನ ಶಿಬಿರ ನಡೆಯಿತು.
ಶಿಬಿರಕ್ಕೆ ಚಾಲನೆ ನೀಡಿದ ರಕ್ತನಿಧಿ ಸಂಚಯದ ವೈದ್ಯಾಧಿಕಾರಿ ಡಾ.ವೀಣಾ ಮಾತನಾಡಿ, ರಕ್ತದಾನದ ಉಪಯುಕ್ತತೆಯನ್ನು ನಾವು ಅರಿತಿರಬೇಕು. ಸಂಘಸಂಸ್ಥೆಗಳು ಸಮಾಜಮುಖಿಯಾಗಿ ಇಂತಹ ಶಿಬಿರಗಳನ್ನು ಆಯೋಜಿಸಬೇಕು ಎಂದರು.
ಬಜರಂಗದಳ ಉಡುಪಿ ಜಿಲ್ಲಾ ಸಹಸಂಚಾಲಕ ಚೇತನ್ ಪೆರಲ್ ಕೆ. ಮಾತನಾಡಿ, ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಮೂಲಕ ಜಿಲ್ಲೆಯ ವಿವಿಧ ಭಾಗಗಳಲ್ಲಿ ಈ ರೀತಿಯ ರಕ್ತದಾನ ಶಿಬಿರಗಳನ್ನು ಹಮ್ಮಿಕೊಳ್ಳುವ ಮೂಲಕ ಜೀವ ಉಳಿಸುವ ಕಾಯಕ ನಡೆಸಲಾಗುತ್ತಿದೆ ಎಂದರು.
ಸೂರ್ಯಕಾಂತ ಶೆಟ್ಟಿ ಹಾಗೂ ವಲಯ ಸೇನಾನಿ ವಿಘ್ನೇಶ್ ಶೆಣೈ, ವಿಶ್ವ ಹಿಂದೂ ಪರಿಷತ್ ಬೆಳ್ಮಣ್ ವಲಯದ ಅಧ್ಯಕ್ಷ ಪ್ರಭಾಕರ್ ಶೆಟ್ಟಿ ಮಾತನಾಡಿದರು. ರೋಟರಿ ಜಿಲ್ಲಾ ಯೂತ್ ಲಿಡರ್ಶಿಪ್ ಸಂಯೋಜಕ ಪಿಎಚ್ಎಫ್ ಶೈಲೇಂದ್ರ ರಾವ್ 60 ಬಾರಿ ರಕ್ತದಾನ ಮಾಡಿದ್ದು, ಅವರನ್ನು ಅಭಿನಂದಿಸಲಾಯಿತು.
ರೋಟರಿ ಕ್ಲಬ್ ಅಧ್ಯಕ್ಷ ನಿತ್ಯಾನಂದ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಆಲ್ವಿನ್ ನೇರಿ ಪಿಂಟೊ ನಿರೂಪಿಸಿದರು. ಸದಸ್ಯ ಪ್ರದೀಪ್ ಶೆಟ್ಟಿ ವಂದಿಸಿದರು. ಶಿಬಿರದಲ್ಲಿ ದಾನಿಗಳಿಂದ 130 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.