ADVERTISEMENT

ತರೀಕೆರೆ | ‘ಗ್ಯಾರಂಟಿ: ಜಿಲ್ಲೆಗೆ ₹2 ಸಾವಿರ ಕೋಟಿ’

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2025, 7:04 IST
Last Updated 20 ಸೆಪ್ಟೆಂಬರ್ 2025, 7:04 IST
ತರೀಕೆರೆ ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಎಂ.ಸಿ. ಶಿವಾನಂದಸ್ವಾಮಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ತರೀಕೆರೆ ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಎಂ.ಸಿ. ಶಿವಾನಂದಸ್ವಾಮಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.   

ತರೀಕೆರೆ: ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಂದ ಜಿಲ್ಲೆಯಲ್ಲಿ 10 ಲಕ್ಷ ಜನರಿಗೆ ಸೌಲಭ್ಯ ದೊರಕುತ್ತಿದ್ದು, ಒಟ್ಟು ₹2 ಸಾವಿರ ಕೋಟಿ ಭರಿಸಲಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಎಂ.ಸಿ. ಶಿವಾನಂದಸ್ವಾಮಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯಡಿ 35,952 ಮಹಿಳೆಯರಿಗೆ ಒಟ್ಟು ₹138 ಕೋಟಿ, ಗೃಹಜ್ಯೋತಿ ಯೋಜನೆಯ ಮೂಲಕ 45,986 ಮೀಟರ್‌ಗಳಿಗೆ ಉಚಿತ ವಿದ್ಯುತ್ ಒದಗಿಸಲಾಗುತ್ತಿದ್ದು, ₹32 ಕೋಟಿ ಅನುದಾನ ನೀಡಲಾಗಿದೆ. ಅನ್ನಭಾಗ್ಯ ಯೋಜನೆ, ಶಕ್ತಿ ಯೋಜನೆ, ಯುವ ನಿಧಿ ಯೋಜನೆಗಳಿಗೆ ತಾಲ್ಲೂಕಿನಲ್ಲಿ ₹250 ಕೋಟಿ ಸಂದಾಯವಾಗಿದೆ ಎಂದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಉಪಾಧ್ಯಕ್ಷ ಸಮೀವುಲ್ಲಾ ಷರೀಫ್, ತಾಲ್ಲೂಕು ಪಂಚಾಯಿತಿ ಇಒ ಆರ್. ದೇವೇಂದ್ರಪ್ಪ ಹಾಜರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.