ADVERTISEMENT

ನರಸಿಂಹರಾಜಪುರ ಧಾರಾಕಾರ ಮಳೆ: ತುಂಬಿ ಹರಿದ ಚರಂಡಿ, ರಸ್ತೆ ತುಂಬಾ ನೀರು

​ಪ್ರಜಾವಾಣಿ ವಾರ್ತೆ
Published 11 ಜೂನ್ 2025, 14:32 IST
Last Updated 11 ಜೂನ್ 2025, 14:32 IST
ನರಸಿಂಹರಾಜಪುರದಲ್ಲಿ ಬುಧವಾರ ಸಂಜೆ ಧಾರಾಕಾರವಾಗಿ ಮಳೆ ಸುರಿದ ಪರಿಣಾಮ ಜೀವನ್ ಜ್ಯೋತಿ ಶಾಲೆಯ ಮುಂಭಾಗದ ಮುಖ್ಯ ರಸ್ತೆ ನೀರಿನಿಂದ ಆವೃತವಾಗಿತ್ತು
ನರಸಿಂಹರಾಜಪುರದಲ್ಲಿ ಬುಧವಾರ ಸಂಜೆ ಧಾರಾಕಾರವಾಗಿ ಮಳೆ ಸುರಿದ ಪರಿಣಾಮ ಜೀವನ್ ಜ್ಯೋತಿ ಶಾಲೆಯ ಮುಂಭಾಗದ ಮುಖ್ಯ ರಸ್ತೆ ನೀರಿನಿಂದ ಆವೃತವಾಗಿತ್ತು   

ನರಸಿಂಂಹರಾಜಪುರ: ಪಟ್ಟಣದ ಸುತ್ತಮುತ್ತಲ ಗ್ರಾಮಗಳ ವ್ಯಾಪ್ತಿಯಲ್ಲಿ ಬುಧವಾರ ಮಧ್ಯಾಹ್ನದ ಗಾಳಿ, ಗುಡುಗು ಸಹಿತ ಧಾರಾಕಾರ ಮಳೆ ಸುರಿಯಿತು.

ಬುಧವಾರ ಬೆಳಿಗ್ಗೆಯಿಂದಲೇ ಮೋಡಕವಿದ ವಾತಾವರಣವಿತ್ತು. ಮಧ್ಯಾಹ್ನ 3ರ ನಂತರ ಇದ್ದಕ್ಕಿದ್ದಂತೆ ಅರ್ಧ ಗಂಟೆಗೂ ಹೆಚ್ಚುಕಾಲ ಧಾರಾಕಾರ ಮಳೆ ಸುರಿಯಿತು. ಬಳಿಕ, ಸ್ವಲ್ಪ ಹೊತ್ತು ಬಿಡುವು ನೀಡಿದ್ದ ಮಳೆ ಪುನಃ 4.30ರ ವೇಳೆಗೆ ಆರಂಭವಾಯಿತು.

ನಿರಂತರ ಸುರಿದ ಮಳೆಗೆ ಪಟ್ಟಣದ ಜೀವನ್ ಜ್ಯೋತಿ ಶಾಲೆ ಮುಂಭಾಗದ ಮುಖ್ಯರಸ್ತೆಯಲ್ಲಿ ಮಳೆ ನೀರು ಸರಾಗವಾಗಿ ಹರಿಯದೆ ರಸ್ತೆಯಲ್ಲಿ ನಿಂತಿತ್ತು. ಇದರಿಂದ ವಾಹನ ಸವಾರರು ಪರದಾಡಿದರು. ಸಂಜೆಯು ಸಹ ಮಳೆ ಮುಂದುವರೆದಿತ್ತು. ಶಾಲೆ ಬಿಡುವ ಸಮಯದಲ್ಲಿ ಮಳೆ ಸುರಿದಿದ್ದರಿಂದ ಮಕ್ಕಳು ಮನೆಗೆ ತೆರಳಲು ಪರದಾಡುವಂತಾಯಿತು.

ADVERTISEMENT
ನರಸಿಂಹರಾಜಪುರ ತಾಲ್ಲೂಕು ಮೆಣಸೂರು ಗ್ರಾಮದ ವ್ಯಾಪ್ತಿಯಲ್ಲಿ ಬುಧವಾರ ಮಧ್ಯಾಹ್ನ ಮಳೆ ಸುರಿದಾಗ ಕಂಡು ಬಂದ ದೃಶ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.