ADVERTISEMENT

‘ಕಸ್ತೂರಿ ರಂಗನ್ ವರದಿ: ಜನರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ’

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2022, 7:40 IST
Last Updated 7 ಆಗಸ್ಟ್ 2022, 7:40 IST
ಸುಧೀರ್ ಕುಮಾರ್ ಮುರೊಳ್ಳಿ
ಸುಧೀರ್ ಕುಮಾರ್ ಮುರೊಳ್ಳಿ   

ಕೊಪ್ಪ: ‘ಕಸ್ತೂರಿ ರಂಗನ್ ವರದಿ ವಿಚಾರದಲ್ಲಿ ಅನಂತ ಹೆಗಡೆ ಅಶೀಸರ ಹಾಗೂ ಸ.ಗಿರಿಜಾಶಂಕರ್ ಅವರು ಜನರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ’ ಎಂದು ಕೆಪಿಸಿಸಿ ಮಾಧ್ಯಮ ವಿಶ್ಲೇಷಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಮುರೊಳ್ಳಿ ಆರೋಪಿಸಿದ್ದಾರೆ.

‘ಪರಿಸರ ಉಳಿವಿನ ಹೆಸರಿನಲ್ಲಿ ಇಲ್ಲಿನ ಜನರನ್ನು ಒಕ್ಕಲೆಬ್ಬಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡುತ್ತಿದ್ದಾರೆ. ಆರ್.ಎಸ್.ಎಸ್. ನಿಲುವುಗಳು ಈ ಇಬ್ಬರ ಮೂಲಕ ವ್ಯಕ್ತವಾಗುತ್ತಿದೆ. ಕಸ್ತೂರಿ ರಂಗನ್ ವರದಿ ವಿಚಾರದಲ್ಲಿ ಬಿಜೆಪಿ ಮತ್ತು ಆರ್.ಎಸ್.ಎಸ್ ಈ ಭಾಗದ ನೆಲವಾಸಿಗಳಿಗೆ ದ್ರೋಹ ಮಾಡುತ್ತಿದೆ’ ಎಂದು ಆರೋಪಿಸಿದ್ದಾರೆ.

‘ಕಸ್ತೂರಿ ರಂಗನ್ ವರದಿ ವಿಚಾರದಲ್ಲಿ ಅದರ ಜಾರಿಗೆ ತಡೆಯೊಡ್ಡಿದ್ದೇವೆ ಎಂದು ಸುಳ್ಳು ಪ್ರಚಾರವನ್ನು ಬಿಜೆಪಿಗರು ಮಾಡುತ್ತಿದ್ದು, ಇಲ್ಲಿನ ಜನರಿಗೆ ದ್ರೋಹ ಮಾಡುತ್ತಿದ್ದಾರೆ’ ಎಂದು ಹೇಳಿಕೆಯಲ್ಲಿ ಆರೋಪಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.