ADVERTISEMENT

ಕೊಪ್ಪ | ಬಂದ್ ಪೂರ್ಣ: ಅಂಗಡಿ ಬಾಗಿಲು ಮುಚ್ಚಿ ಬೆಂಬಲ

​ಪ್ರಜಾವಾಣಿ ವಾರ್ತೆ
Published 5 ಮೇ 2025, 12:58 IST
Last Updated 5 ಮೇ 2025, 12:58 IST
ಕೊಪ್ಪ ಪಟ್ಟಣದ ಮಾರ್ಕೆಟ್ ರಸ್ತೆ ಸಂಪೂರ್ಣ ಸ್ತಬ್ಧವಾಗಿತ್ತು
ಕೊಪ್ಪ ಪಟ್ಟಣದ ಮಾರ್ಕೆಟ್ ರಸ್ತೆ ಸಂಪೂರ್ಣ ಸ್ತಬ್ಧವಾಗಿತ್ತು   

ಕೊಪ್ಪ: ಕಾಶ್ಮೀರದ ಪಹಲ್ಗಾಮ್‌ನಲ್ಲಿ  ಭಯೋತ್ಪಾದಕರು ನಡೆಸಿದ ದಾಳಿ, ಮಂಗಳೂರಿನಲ್ಲಿ ನಡೆದ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಖಂಡಿಸಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಕರೆ ನೀಡಿದ್ದ ಕೊಪ್ಪ ಬಂದ್‌ಗೆ ಸೋಮವಾರ ವ್ಯಾಪಕ ಬೆಂಬಲ ವ್ಯಕ್ತವಾಯಿತು.

ಪಟ್ಟಣದಲ್ಲಿ ವರ್ತಕರು ಬೆಳಿಗ್ಗೆಯಿಂದಲೇ ಅಂಗಡಿ ಮುಂಗಟ್ಟುಗಳ ಬಾಗಿಲು ಮುಚ್ಚಿದ್ದರು. ಆಸ್ಪತ್ರೆ, ಮೆಡಿಕಲ್, ಪೆಟ್ರೋಲ್ ಬಂಕ್, ಸರ್ಕಾರಿ ಕಚೇರಿಗಳು ಬಾಗಿಲು ತೆರೆದಿದ್ದವು, ಬಸ್‌ ಸಂಚಾರ ಎಂದಿನಂತೆ ಇದ್ದರೂ, ಪ್ರಯಾಣಿಕರ ಸಂಖ್ಯೆ ಕಡಿಮೆ ಇತ್ತು. ಆಟೊಗಳ ಓಡಾಟ ವಿರಳವಾಗಿತ್ತು. ಹೋಟೆಲ್‌ಗಳು ಬಾಗಿಲು ಮುಚ್ಚಿದವು.

ಪ್ರತಿದಿನ ಜನರ ದಟ್ಟಣೆಯಿಂದ ಗಿಜಿಗುಡುತ್ತಿದ್ದ ಮಾರುಕಟ್ಟೆ ಸೋಮವಾರ ಜನರು, ವಾಹನಗಳ ಓಡಾಟ ಇಲ್ಲದೆ ಬಿಕೋ ಎನ್ನುತ್ತಿತ್ತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.