ಚಿಕ್ಕಮಗಳೂರು: ಕರ್ತವ್ಯದಲ್ಲಿದ್ದಾಗಲೇ ಬಸ್ನಲ್ಲಿ ಹೃದಯಾಘಾತವಾಗಿ ಕೆಎಸ್ಆರ್ಟಿಸಿನಿರ್ವಾಹಕ ವಿಜಯ ಕುಮಾರ್ (42) ಮೃತಪಟ್ಟಿದ್ದಾರೆ.
ವಿಜಯಕುಮಾರ್ ಅವರು ಸಖರಾಯಪಟ್ಟಣ ಬಳಿ ಕುನ್ನಾಳು ಗ್ರಾಮದವರು.
'ಚಿಕ್ಕಮಗಳೂರು ನಗರ ನಿಲ್ದಾಣದಿಂದ ಬೆಳಿಗ್ಗೆ6 ಗಂಟೆಗೆ ಉಡುಪಿಗೆ ಬಸ್ ಹೊರಟಿತ್ತು. ಕೊಟ್ಟಿಗೆಹಾರ ಬಳಿ ಸಾಗುವಾಗ ನಿರ್ವಾಹಕವಿಜಯ ಕುಮಾರ್ ಅಸ್ವಸ್ಥರಾಗಿದ್ದಾರೆ. ತಕ್ಷಣವೇ ಚಾಲಕ ಮತ್ತು ಕೊಟ್ಟಿಗೆಹಾರ ನಿಲ್ದಾಣ ನಿರೀಕ್ಷಕ ಬಣಕಲ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿಂದ ಮೂಡಿಗೆರೆ ಆಸ್ಪತ್ರೆಗೆ ಒಯ್ದಿದ್ದಾರೆ. ಆದರೆ, ಚಿಕಿತ್ಸೆ ಫಲಿಸದೇಅಲ್ಲಿ ಅವರು ಮೃತಪಟ್ಟಿದ್ದಾರೆ' ಎಂದು ಚಿಕ್ಕಮಗಳೂರು ಕೆಎಸ್ ಆರ್ ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ಟಿ. ವೀರೇಶ್ 'ಪ್ರಜಾವಾಣಿ'ಗೆ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.