ADVERTISEMENT

‘ಲವ್‌ ಜಿಹಾದ್‌ ಭಯೋತ್ಪಾದನೆಯ ಮತ್ತೊಂದು ಮುಖ’

​ಪ್ರಜಾವಾಣಿ ವಾರ್ತೆ
Published 4 ನವೆಂಬರ್ 2020, 16:26 IST
Last Updated 4 ನವೆಂಬರ್ 2020, 16:26 IST
ಶೋಭಾ ಕರಂದ್ಲಾಜೆ
ಶೋಭಾ ಕರಂದ್ಲಾಜೆ   

ಚಿಕ್ಕಮಗಳೂರು: ‘ಲವ್‌ ಜಿಹಾದ್‌ ಭಯೋತ್ಪಾದನೆಯ ಮತ್ತೊಂದು ಮುಖ. ಅದರ ಹೆಸರಿನಲ್ಲಿ ಮತಾಂತರ ನಡೆಯುತ್ತಿದೆ. ಇದು ದೇಶದಲ್ಲಿ ಒಂದು ಕೋಮಿನ ಜನಸಂಖ್ಯೆ ಹೆಚ್ಚಿಸುವ ವ್ಯವಸ್ಥಿತ ಷಡ್ಯಂತ್ರ’ ಎಂದು ಸಂಸದೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯಿಸಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದ ಕರಾವಳಿ ಸಹಿತ ಬೆಂಗಳೂರಿನ ವಿವಿಧ ಭಾಗಗಳಲ್ಲಿ ಇಂಥ ಷಡ್ಯಂತ್ರ ನಡೆಯುತ್ತಿದೆ. ಹೀಗಾಗಿ, ಲವ್‌ ಜಿಹಾದ್‌ ತಡೆ, ಮತಾಂತರ ನಿಷೇಧ ಕಾಯ್ದೆ ತರುವ ಅಗತ್ಯ ಇದೆ. ಲವ್‌ ಜಿಹಾದ್‌ ಹೆಸರಿನಲ್ಲಿ ಮೋಸ ಮಾಡುವವರಿಗೆ ಕಠಿಣ ಶಿಕ್ಷೆ ನಿಗದಿಪಡಿಸಬೇಕು’ ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT