ಚಿಕ್ಕಮಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಇಂದು ಮತ್ತು ನಾಳೆ ನಡೆಯಲಿರುವ ರಾಜ್ಯಮಟ್ಟದ ಮಹಿಳಾ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ ದೊರೆಯಿತು.
ನಗರದ ಕುವೆಂಪು ಕಲಾಮಂದಿರದಲ್ಲಿ ಶನಿವಾರ ಸಮ್ಮೇಳನದ ಉದ್ಘಾಟನೆ ನಡೆಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಕೆ.ಎಂ.ಜಾನಕಿ ಉದ್ಘಾಟನೆ ನೆರವೇರಿಸಿದರು.
ಇನ್ಫೊಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಸಮ್ಮೇಳನಾಧ್ಯಕ್ಷರಾಗಿದ್ದು, ಕಸಾಪ ಅಧ್ಯಕ್ಷ ಡಾ.ಮನು ಬಳಿಗಾರ್ ಅಧ್ಯಕ್ಷತೆ ವಹಿಸಿದ್ದಾರೆ.
‘ಕನ್ನಡ ಸಾಹಿತ್ಯ ಮತ್ತು ಮಹಿಳಾ ನೋಟ’, ‘ವಿವಿಧ ಕ್ಷೇತ್ರಗಳಿಗೆ ಮಹಿಳೆಯರ ಕೊಡುಗೆ’, ‘ಮಹಿಳೆ ಮತ್ತು ಚಳವಳಿ’ ಗೋಷ್ಠಿ, ಕವಿಗೋಷ್ಠಿಗಳು ನಡೆಯಲಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.