ADVERTISEMENT

ಚಿಕ್ಕಮಗಳೂರು | ಮಳೆ ಹಾನಿ; ಗುಡ್ಡ ಕುಸಿದ ಪ್ರದೇಶಕ್ಕೆ ಸಚಿವ ಬಸವರಾಜು ಭೇಟಿ

​ಪ್ರಜಾವಾಣಿ ವಾರ್ತೆ
Published 16 ಜುಲೈ 2022, 8:17 IST
Last Updated 16 ಜುಲೈ 2022, 8:17 IST
   

ಚಿಕ್ಕಮಗಳೂರು: ತಾಲ್ಲೂಕಿನ ಆಲ್ದೂರು ಸಮೀಪದ ಅರೇನೂರಿನಲ್ಲಿ ಕಾಫಿ ತೋಟದಲ್ಲಿ ಗುಡ್ಡದ ಮಣ್ಣು ಕುಸಿದಿರುವ ಪ್ರದೇಶವನ್ನು ಸಚಿವ ಬಿ.ಎ.ಬಸವರಾಜು (ಭೈರತಿ ಬಸವರಾಜು) ವೀಕ್ಷಿಸಿದರು.

ಕಾಫಿ ಗಿಡಗಳು ಹಾನಿಯಾಗಿರುವುದು, ತೋಟದಲ್ಲಿ ಕೆಸರು ನೀರು ಹರಿಯುತ್ತಿರುವುದು, ರಸ್ತೆ ಹದಗೆಟ್ಟಿರುವುದನ್ನು ವೀಕ್ಷಿಸಿದರು.

'ಮಳೆ ಹಾನಿ ಪ್ರದೇಶ ವೀಕ್ಷಣೆ ಮಾಡಿದ್ದೇವೆ. ಸಂತ್ರಸ್ತರಿಗೆ ಪರಿಹಾರ ಒದಗಿಸಲು ಕ್ರಮ ವಹಿಸಲಾಗುವದು' ಎಂದು ಸಚಿವ ಬಸವರಾಜು ತಿಳಿಸಿದರು.

ADVERTISEMENT

ಜಿಲ್ಲಾ ಉಸ್ತುವಾರಿ ಸಚಿವ ನೇಮಕ
ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ ( ಭೈರತಿ ಬಸವರಾಜ) ಅವರಿಗೆ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ವಹಿಸಲಾಗಿದೆ. ದಾವಣಗೆರೆ ಜಿಲ್ಲಾ ಉಸ್ತುವಾರಿ ಜೊತೆಗೆ ಈಗ ಚಿಕ್ಕಮಗಳೂರು ಉಸ್ತುವಾರಿ ವಹಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.