ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ 15 ವರ್ಷದ ಬಾಲಕಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಒಟ್ಟು 17 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ 16 ಮಂದಿ, ಕ್ರಷರ್ ಕೆಲಸಕ್ಕೆ ಬಾಲಕಿ ನೇಮಿಸಿಕೊಂಡಿದ್ದಕ್ಕೆ ಸಂಬಂಧಿಸಿದಂತೆ ಕ್ರಷರ್ ಮಾಲೀಕನ ವಿರುದ್ಧ ಪ್ರಕರಣ ದಾಖಲಾಗಿದೆ.
ಈ ಪೈಕಿ ಬಾಲಕಿಯ ಸಂಬಂಧಿ ಮಹಿಳೆ ಗೀತಾ (ಚಿಕ್ಕಮ್ಮ ಎಂದು ಹೇಳಿಕೊಂಡಿರುವ), ಸ್ಮಾಲ್ ಅಭಿ, ಗಿರೀಶ್, ವಿಕಾಸ್, ಮಣಿಕಂಠ, ಅಶ್ವತ್ಥ್ ಗೌಡ, ರಾಜೇಶ್ ಈ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.
ಸಂಪತ್, ಅಮಿತ್, ಸಂತೋಷ್, ದೀಕ್ಷಿತ್, ಸಂತೋಷ್, ನಿರಂಜನ್, ನಯನ್ಗೌಡ, ಅಭಿಗೌಡ, ಯೋಗೀಶ್, ಕ್ರಷರ್ ಮಾಲೀಕ ಈ ಆರೋಪಿಗಳು ತಲೆಮೆರೆಸಿಕೊಂಡಿದ್ದಾರೆ. ಪತ್ತೆಗೆ ಬಲೆ ಬೀಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳು ನಿರಂತರವಾಗಿ ಬಾಲಕಿಯನ್ನು ಲೈಂಗಿಕವಾಗಿ ಶೋಷಣೆ ಮಾಡಿದ್ದಾರೆ. ಕೃತ್ಯಕ್ಕೆ ಬಾಲಕಿಯ ಸಂಬಂಧಿ ಗೀತಾ ಕುಮ್ಮಕ್ಕು ನೀಡಿರುವ ಗುಮಾನಿ ಇದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.