ಶೃಂಗೇರಿ: ಇಲ್ಲಿನ ವಿದ್ಯಾರಣ್ಯಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊರನಕೊಡಿಗೆಯ ಮನ್ಸೂರ್ ಅವರ ಮನೆಗೆ ಬುಧವಾರ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ.
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಮನೆಯ ಹಿಂಭಾಗದ ಟಾರ್ಪಾಲ್ ಮತ್ತು ಗೃಹೋಪಯೋಗಿ ವಸ್ತುಗಳು ಸುಟ್ಟು ಹೋಗಿವೆ. ಆಗಸ್ಟ್ 28ರಂದು ಮನ್ಸೂರ್ ಅವರ ಮನೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಮತ್ತೆ ಬುಧವಾರ ಈ ಕೃತ್ಯ ಎಸಗಿದ್ದಾರೆ. ವಿದ್ಯಾರಣ್ಯಪುರದಲ್ಲಿ ನಾಲ್ಕನೇ ಬಾರಿ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ.
‘ವಿದ್ಯಾರಣ್ಯಪುರದಲ್ಲಿ ಈ ರೀತಿಯ ಕೃತ್ಯ ನಾಲ್ಕು ಬಾರಿ ನಡೆದಿದೆ. ತನಿಖೆ ಮುಂದುವರಿದಿದ್ದು ಕೂಡಲೇ ಆರೋಪಿಗಳನ್ನು ಬಂಧಿಸುತ್ತೇವೆ’ ಎಂದು ಡಿವೈಎಸ್ಪಿ ಗುಂಜನ್ ಆರ್ಯ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.