ADVERTISEMENT

ನಾನೂ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ: ಶಾಸಕ ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2020, 3:47 IST
Last Updated 22 ನವೆಂಬರ್ 2020, 3:47 IST
ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಮಂಗಳೂರಿನಲ್ಲಿ ಭೇಟಿಯಾದರು.
ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಮಂಗಳೂರಿನಲ್ಲಿ ಭೇಟಿಯಾದರು.   

ಕೊಟ್ಟಿಗೆಹಾರ: ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರು ಮಂಗಳೂರಿನಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿ ಮಾಡಿ, ತಮ್ಮ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.

ಅವರು ಮಂಗಳೂರಿನಿಂದ ಮೂಡಿಗೆರೆಗೆ ಮರಳುವ ಮಾರ್ಗ ಮಧ್ಯೆ ಕೊಟ್ಟಿಗೆಹಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾನು 3 ಬಾರಿ ಶಾಸಕನಾಗಿ ಆಯ್ಕೆಯಾಗಿದ್ದು, ಬಿಜೆಪಿಯ ಜಿಲ್ಲೆಯ ಹಿರಿಯ ಶಾಸಕನಾಗಿದ್ದೇನೆ. ಜಿಲ್ಲೆಯಲ್ಲಿ ಸಿ.ಟಿ.ರವಿ ಅವರು ಶ್ರಮ ವಹಿಸಿ ಪಕ್ಷದಲ್ಲಿ ದುಡಿದು ಸಚಿವರಾಗಿದ್ದಾರೆ. ಈಗ ಅವರು ರಾಜೀನಾಮೆ ನೀಡಿದ್ದು, ಆ ಹುದ್ದೆಯು ಖಾಲಿಯಿರುತ್ತದೆ. ನಾನು ಕೂಡ ಪಕ್ಷದಲ್ಲಿ ಸಚಿವನಾಗಿ ಸೇವೆ ನೀಡಲು ಆಕಾಂಕ್ಷಿಯಾಗಿದ್ದೇನೆ. ಪಕ್ಷದ ವರಿಷ್ಠರಲ್ಲಿ ಈ ಬಗ್ಗೆ ಮನವಿ ಮಾಡುತ್ತಿದ್ದೇನೆ’ ಎಂದರು.

ಮೂಡಿಗೆರೆ ತಾಲ್ಲೂಕು ಮಂಡಲ ಅಧ್ಯಕ್ಷ ಜೆ.ಸಿ.ರಘು, ಪಟ್ಟಣ ಪಂಚಾಯಿತಿಯ ಸದಸ್ಯ ಜಿ.ಬಿ.ಧರ್ಮಪಾಲ್, ಜಿಲ್ಲಾ ರೈತ ಮೋರ್ಚಾ ಉಪಾಧ್ಯಕ್ಷ ಸಂದರ್ಷ, ವಿಎಸ್‍ಎಸ್‍ನ ವಿ.ಕೆ.ಶಿವೇಗೌಡ, ಸಂದೀಪ್‍ ಕೊಟ್ಟಿಗೆಹಾರ, ಚಂದ್ರು, ಭರತ್ ಕನ್ನೇಹಳ್ಳಿ, ಉತ್ತಮ್ ಬಣಕಲ್ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.