ADVERTISEMENT

ಕೊಲೆ ಪ್ರಕರಣ: ಮೃತದೇಹ ಪತ್ತೆಗೆ ಚಾರ್ಮಾಡಿ ಘಾಟಿಯಲ್ಲಿ ನಡೆದ ಹುಡುಕಾಟ ಅಂತ್ಯ

ಶವ ಸಿಗದೇ ವಾಪಾಸಾದ ಬೆಂಗಳೂರು ಪೊಲೀಸರು.

​ಪ್ರಜಾವಾಣಿ ವಾರ್ತೆ
Published 6 ಜನವರಿ 2023, 6:07 IST
Last Updated 6 ಜನವರಿ 2023, 6:07 IST
ಚಾರ್ಮಾಡಿ ಘಾಟಿಯಲ್ಲಿ ಕಳೆದ ಮೂರು ದಿನಗಳಿಂದ ಶವ ಶೋಧ ನಡೆಸಿದ ಬೆಂಗಳೂರು ಪೊಲೀಸರ ಜತೆ ಸ್ಥಳೀಯರು.
ಚಾರ್ಮಾಡಿ ಘಾಟಿಯಲ್ಲಿ ಕಳೆದ ಮೂರು ದಿನಗಳಿಂದ ಶವ ಶೋಧ ನಡೆಸಿದ ಬೆಂಗಳೂರು ಪೊಲೀಸರ ಜತೆ ಸ್ಥಳೀಯರು.   

ಕೊಟ್ಟಿಗೆಹಾರ: ಒಂಬತ್ತು ತಿಂಗಳ ಹಿಂದೆ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೊಲೆಯಾದ ಯುವಕನ ಮೃತದೇಹದ ಶೋಧಕ್ಕಾಗಿ ಚಾರ್ಮಾಡಿ ಘಾಟಿ ಪ್ರದೇಶಕ್ಕೆ ಬಂದಿದ್ದ ಬೆಂಗಳೂರು ಪೊಲೀಸರು ಗುರುವಾರ ಹುಡುಕಾಟ ನಿಲ್ಲಿಸಿ, ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.

ಆರೋಪಿಗಳು ಶವ ಎಸೆದ ಜಾಗವನ್ನು ಗುರುತಿಸಲು ವಿಫಲವಾಗಿರುವುದರಿಂದ ಶೋಧ ಕಾರ್ಯ ವಿಳಂಬವಾಯಿತು. ಮೂರು ದಿನ ಕಬ್ಬನ್ ಪಾರ್ಕ್ ಮತ್ತು ಅಶೋಕನಗರ ಪೊಲೀಸರು, ಮೂಡಿಗೆರೆಯ ಸಾಮಾಜಿಕ ಸಕ್ರಿಯ ಕಾರ್ಯಕರ್ತರು, ಸಮಾಜ ಸೇವಕ ಮೊಹಮ್ಮದ್ ಆರೀಫ್ ಹಾಗೂ ಸ್ಥಳೀಯರ ಸಹಕಾರದಿಂದ ಚಾರ್ಮಾಡಿ ಅಣ್ಣಪ್ಪ ಸ್ವಾಮಿ ದೇವಸ್ಥಾನದಿಂದ ಮುಂದಿನ ಪ್ರಪಾತ, ಸೋಮನಕಾಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು. ಶವ ಹಾಕಿದ್ದ ಗೋಣಿಚೀಲ ಸಿಕ್ಕರೂ, ಮೃತದೇಹ ಪತ್ತೆಯಾಗಿರಲಿಲ್ಲ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT