ನರಸಿಂಹರಾಜಪುರ: ಯೋಗವು ವಿಶ್ವಕ್ಕೆ ಭಾರತವು ನೀಡಿದ ದೊಡ್ಡ ಕೊಡುಗೆ ಎಂದು ನಿವೃತ್ತ ಶಿಕ್ಷಕ ಕೆ.ಎಸ್.ರಾಜಕುಮಾರ್ ಹೇಳಿದರು.
ಇಲ್ಲಿನ ರೋಟರಿ ಹಾಲ್ನಲ್ಲಿ ನಡೆದ ವಾರದ ಸಭೆಯಲ್ಲಿ ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ಯೋಗದ ಬಗ್ಗೆ ಉಪನ್ಯಾಸ ನೀಡಿದ ಅವರು, ಯೋಗವು ದೇಹ ಮತ್ತು ಮನಸ್ಸನ್ನು ಒಗ್ಗೂಡಿಸುವ ಒಂದು ಪ್ರಕ್ರಿಯೆಯಾಗಿದೆ ಎಂದರು.
ರೋಟರಿ ಅಧ್ಯಕ್ಷ ಜಿ.ಆರ್.ದಿವಾಕರ್ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಸದಸ್ಯರಾದ ಎಸ್.ಎಸ್. ಶಾಂತಕುಮಾರ್, ಧನಂಜಯ, ಡಾ.ಎಲ್ದೋಸ್, ಕಣಿವೆ ವಿನಯ್, ಲೋಕೇಶ್, ಸೋಮಶೇಖರ್, ಕಿರಣ್, ಮನೀಶ್, ಚೇತನ್, ವಿದ್ಯಾನಂದಕುಮಾರ್ ಇದ್ದರು. ಉಪನ್ಯಾಸ ನೀಡಿದ ರಾಜಕುಮಾರ್ ಅವರನ್ನು ರೋಟರಿ ಸಂಸ್ಥೆಯಿಂದ ಸನ್ಮಾನಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.