ADVERTISEMENT

ಕೊಟ್ಟಿಗೆಹಾರ|ಭತ್ತದ ಕೃಷಿಗೂ ನರೇಗಾ ಅಳವಡಿಸಲಿ: ಒತ್ತಾಯ

​ಪ್ರಜಾವಾಣಿ ವಾರ್ತೆ
Published 24 ಜೂನ್ 2023, 12:56 IST
Last Updated 24 ಜೂನ್ 2023, 12:56 IST
ನವೀನ್ ಹಾವಳಿ
ನವೀನ್ ಹಾವಳಿ   

ಕೊಟ್ಟಿಗೆಹಾರ: ಗ್ರಾಮ ಪಂಚಾಯಿತಿಯಿಂದ ಆಯ್ಕೆಯಾದ ಅಡಿಕೆ ಬೆಳೆಗಾರರಿಗೆ ಮತ್ತು ಕಾಳು ಮೆಣಸು ಬೆಳೆಗಾರರಿಗೆ ಉದ್ಯೋಗ ಖಾತರಿ ಯೋಜನೆಯಲ್ಲಿ ಅನುಕೂಲ ಆಗುತ್ತಿದ್ದು, ಭತ್ತದ ಕೃಷಿಕರಿಗೂ ಸರ್ಕಾರ ಎನ್ಎಂಆರ್ ಮೂಲಕ ಹಣ ಜಮಾ ಮಾಡಬೇಕು ಎಂದು ನಿಡುವಾಳೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನವೀನ್ ಹಾವಳಿ ಒತ್ತಾಯಿಸಿದ್ದಾರೆ.

ಕಡಿಮೆ ಇಳುವರಿ ಹಾಗೂ ಬೆಂಬಲ ಬೆಲೆಯ ಕೊರತೆಯಿಂದ ಹಲವು ಕೃಷಿಕರು ಭತ್ತದ ಕೃಷಿಯನ್ನು ಕೈಬಿಟ್ಟಿದ್ದಾರೆ. ತೋಟಗಾರಿಕೆ ಇಲಾಖೆಯಿಂದ ಅಡಿಕೆ, ಕಾಳು ಮೆಣಸು ಬೆಳೆಗಾರರಿಗೆ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಎನ್ಎಂಆರ್ ಮೂಲಕ ಹಣವನ್ನು ಜಮಾ ಮಾಡುವಂತೆ ಭತ್ತ ಬೆಳೆಯುವ ರೈತರಿಗೂ ಈ ವ್ಯವಸ್ಥೆ ಮಾಡಿದರೆ ರೈತರಿಗೆ ಅನುಕೂಲವಾಗಲಿದೆ. ಭತ್ತದ ಕೃಷಿಕರಿಗೆ ಸರ್ಕಾರ ಉತ್ತೇಜನ ನೀಡಬೇಕು. ರೈತರು ಅತಿವೃಷ್ಟಿ, ಅನಾವೃಷ್ಟಿ ಹಾಗೂ ಕಾಡು ಪ್ರಾಣಿಗಳ ಹಾವಳಿಯಿಂದ ನಷ್ಟ ಅನುಭವಿಸುತ್ತಿದ್ದು, ಅವರಿಗೆ ನೆರವಾಗಬೇಕು ಎಂದು ಅವರು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT