ನರಸಿಂಹರಾಜಪುರ: ಬೆಂಗಳೂರಿನಿಂದ ಶೃಂಗೇರಿಗೆ ಪ್ರತಿನಿತ್ಯ ‘ಪಲ್ಲಕ್ಕಿ’ ಕೆಎಸ್ಆರ್ಟಿಸಿ ಬಸ್ ಸೇವೆ ಆರಂಭಿಸಲಾಗಿದೆ.
ಬೆಂಗಳೂರಿನಿಂದ ರಾತ್ರಿ 9ಕ್ಕೆ ಹೊರಡುವ ಬಸ್ ಬೆಳಿಗ್ಗೆ 5ಕ್ಕೆ ಶೃಂಗೇರಿ ತಲುಪಲಿದೆ. ಪುನಃ ರಾತ್ರಿ ಶೃಂಗೇರಿಯಿಂದ 9.11ಕ್ಕೆ ಹೊರಡುವ ಬಸ್ ಬೆಳಿಗ್ಗೆ 5.30ಕ್ಕೆ ಬೆಂಗಳೂರು ತಲುಪಲಿದೆ. ಶೃಂಗೇರಿ ಕ್ಷೇತ್ರಕ್ಕೆ ಪಲ್ಲಕ್ಕಿ ಬಸ್ ಬಿಡುವಂತೆ ಶಾಸಕ ಟಿ.ಡಿ.ರಾಜೇಗೌಡ ಅವರು ಸಾರಿಗೆ ಸಚಿವರನ್ನು ವಿನಂತಿಸಿದ್ದರು ಎಂದು ಶಾಸಕರ ಕಚೇರಿಯ ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.