ADVERTISEMENT

ಪೆನ್ ಡ್ರೈವ್‌ ಪ್ರಕರಣ | ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ: ಶಾಸಕ‌ ಕೆ.ಎಸ್.ಆನಂದ್

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2024, 13:53 IST
Last Updated 27 ಏಪ್ರಿಲ್ 2024, 13:53 IST

ಕಡೂರು: ಹಾಸನ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಪರ ಒಲವು ವ್ಯಕ್ತವಾಗಿದೆ ಎಂದು ಶಾಸಕ‌ ಕೆ.ಎಸ್.ಆನಂದ್ ಹೇಳಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕ್ಷೇತ್ರದ ಜನರು ಹಾಲಿ ಸಂಸದರ ಬಗ್ಗೆ ಬೇಸರಗೊಂಡಿದ್ದಾರೆ. ಶ್ರೇಯಸ್ ಪಟೇಲ್‌ಗೆ ಕಡೂರಿನಲ್ಲಿ 10 ಸಾವಿರಕ್ಕೂ ಹೆಚ್ಚು ಮತಗಳ ಮುನ್ನಡೆ ದೊರೆಯಲಿದೆ ಎಂದರು.

ಕುಮಾರಸ್ವಾಮಿಯವರು ಪದೇ ಪದೇ ಪೆನ್ ಡ್ರೈವ್ ಬಗ್ಗೆ ಮಾತನಾಡುತ್ತಿದ್ದರು. ಅದು ಬಹುಶಃ ಈಗ ಸುದ್ದಿಯಾಗಿರುವ ಪೆನ್ ಡ್ರೈವ್ ಇರಬೇಕು ಎಂದ ಶಾಸಕರು, ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದರು. 

ADVERTISEMENT

ಹಗರಣಗಳಾದಾಗಲೆಲ್ಲ ಹಾರಾಡುತ್ತಿದ್ದ ಹಿಂದುತ್ವವಾದಿಗಳು ಈಗ ಎಲ್ಲೂ ಕಾಣುತ್ತಿಲ್ಲ ಎಂದು ವ್ಯಂಗ್ಯವಾಡಿದರು. ಪುರಸಭೆ ಸದಸ್ಯ ಈರಳ್ಳಿ ರಮೇಶ್ ಮತ್ತು ಅರುಣ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.