ADVERTISEMENT

ಚಿಕ್ಕಮಗಳೂರು: ಕಾನ್‌ಸ್ಟೆಬಲ್ ಸಾವು, ವಿಷ ಸೇವನೆ ಶಂಕೆ 

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2019, 3:57 IST
Last Updated 19 ಏಪ್ರಿಲ್ 2019, 3:57 IST
   

ಚಿಕ್ಕಮಗಳೂರು: ಜಿಲ್ಲೆಯ ಎನ್.ಆರ್.ಪುರ ತಾಲ್ಲೂಕಿನ ಬಾಳೆಹೊನ್ನೂರು ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್ ಯೋಗೀಶ್ (32) ಶುಕ್ರವಾರ ನಸುಕಿನಲ್ಲಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಠಾಣೆಯ ವಿಶ್ರಾಂತಿ ಕೋಣೆಯಲ್ಲಿ ರಾತ್ರಿ 3 ಗಂಟೆ ಹೊತ್ತಿನಲ್ಲಿ ಕುಸಿದುಬಿದ್ದು ಒದ್ದಾಡುತ್ತಿದ್ದ ಯೋಗೀಶ್ ಅವರನ್ನು ಸಹೋದ್ಯೋಗಿಗಳು ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಮಾತ್ರೆ ಅಥವಾ ವಿಷ ಸೇವಿಸಿರಬಹುದು ಎಂದು ಶಂಕಿಸಲಾಗಿದೆ.

ADVERTISEMENT

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರೀಶ್ ಪಾಂಡೆ ಅವರು ಠಾಣೆಗೆ ಭೇಟಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.