ಚಿಕ್ಕಮಗಳೂರು: ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಶೃಂಗೇರಿಯಿಂದ ಸಂಜೆ ವಾಪಸಾಗುವಾಗ ಕುರುಬಗೇರಿಯ ಅಂಬೇಡ್ಕರ್ ವಸತಿ ಶಾಲೆಯ ಬಳಿ ವಾಹನ ನಿಲ್ಲಿಸಿ ಕೆಳಗಿಳಿದು ವಿದ್ಯಾರ್ಥಿಗಳಿಗೆ ‘ಆಲ್ ದ ಬೆಸ್ಟ್’ ಹೇಳಿದರು.
ರಾಷ್ಟ್ರಪತಿ ವಾಹನದಲ್ಲಿ ತೆರಳುವಾಗ ಮಾರ್ಗದ ಬದಿಯಲ್ಲಿ ವಿದ್ಯಾರ್ಥಿಗಳು ನಿಂತಿದ್ದರು. ರಾಷ್ಟ್ರಪತಿಯವರು ವಿದ್ಯಾರ್ಥಿಗಳನ್ನು ನೋಡಿ ವಾಹನ ನಿಲ್ಲಿಸಿ ಕೆಳಗಿಳಿದು ‘ಆಲ್ ದ ಬೆಸ್ಟ್’ ಹೇಳಿದರು. ಅಲ್ಲಿದ್ದ ವಿದ್ಯಾರ್ಥಿಗಳು ಸಂತಸ ವ್ಯಕ್ತಪಡಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.