ಚಿಕ್ಕಮಗಳೂರು: ಜಿಲ್ಲೆಯ ಕೊಪ್ಪದ ಗುಬ್ಬಗದ್ದೆಯ ಯುವತಿ ಅಮೂಲ್ಯ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ್ದನ್ನು ವಿರೋಧಿಸಿ ವಿವಿಧ ಪಕ್ಷ, ಸಂಘಟನೆಗಳವರು ಕೊಪ್ಪದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ಪುರಭವನದಿಂದ ಬಸ್ ನಿಲ್ದಾಣದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಬಸ್ ನಿಲ್ದಾಣದಲ್ಲಿ ಅಮೂಲ್ಯ ಪ್ರತಿಕೃತಿ ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಅಮೂಲ್ಯಗೆ ಜಾಮೀನು ನೀಡಬಾರದು, ಕಠಿಣ ಶಿಕ್ಷೆ ವಿಧಿಸಬೇಕು ಎಂದು ಪ್ರತಿಭಟನಾಕಾರರು ಘೋಷಣೆ ಕೂಗಿದರು. ನಂತರ ಶಿರಸ್ತೇದಾರ್ಗೆ ಮನವಿ ಪತ್ರ ಸಲ್ಲಿಸಿದರು.
ಅಮೂಲ್ಯ ಮನೆಗೆ ಕಲ್ಲು ತೂರಾಟ: ಕೊಪ್ಪ ತಾಲ್ಲೂಕಿನ ಹಿರೇಕೂಡಿಗೆ ಸಮೀಪದ ಗುಬ್ಬಗದ್ದೆಯಲ್ಲಿರುವ ಅಮೂಲ್ಯ ಮನೆ ಮೇಲೆ ಗುರುವಾರ ರಾತ್ರಿ ಕೆಲವರು ಕಲ್ಲು ತೂರಾಟ ನಡೆಸಿದ್ದಾರೆ. ಕಿಟಕಿ ಗಾಜುಗಳು ಒಡೆದಿವೆ.
ಕಲ್ಲು ತೂರಿದ್ದಕ್ಕೆ ಸಂಬಂಧಿಸಿದಂತೆ ಒಂಬತ್ತು ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಮನೆ ಬಳಿ ಪೊಲೀಸರನ್ನು ನಿಯೋಜಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.