ADVERTISEMENT

ಮೂತ್ರ ನೆಕ್ಕಿಸಿದ ಪ್ರಕರಣ: ಆರೋಪಿ ಪಿಎಸ್‌ಐ ನ್ಯಾಯಾಂಗ ಬಂಧನ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2021, 9:32 IST
Last Updated 2 ಸೆಪ್ಟೆಂಬರ್ 2021, 9:32 IST
ಪಿಎಸ್‌ಐ ಅರ್ಜುನ್‌
ಪಿಎಸ್‌ಐ ಅರ್ಜುನ್‌   

ಚಿಕ್ಕಮಗಳೂರು: ಪರಿಶಿಷ್ಟ ಜಾತಿಯ ಯುವಕರೊಬ್ಬರಿಗೆ ಮೂತ್ರ ನೆಕ್ಕಿಸಿದ ಆರೋಪ ಎದುರಿಸುತ್ತಿರುವ ಪಿಎಸ್‌ಐ ಅರ್ಜುನ್‌ ಅವರನ್ನು ನಗರದ ಒಂದನೇ ಹೆಚ್ಚುವರಿ ಸೆಷನ್ಸ್‌ ಕೋರ್ಟ್‌ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಸಿಐಡಿ ತಂಡವು ಅರ್ಜುನ್‌ ಅವರನ್ನು ಒಂದನೇ ಹೆಚ್ಚುವರಿ ಸೆಷನ್ಸ್‌ ಕೋರ್ಟ್‌ ನ್ಯಾಯಾಧೀಶರಾದ ಪುಷ್ಪಾಂಜಲಿ ಅವರ ಮುಂದೆ ಗುರುವಾರ ಹಾಜರುಪಡಿಸಿತ್ತು.

ಮೂಡಿಗೆರೆ ತಾಲ್ಲೂಕಿನ ಕಿರಗುಂದ ಗ್ರಾಮದ ಪುನೀತ್‌ಗೆ ಗೋಣಿಬೀಡು ಠಾಣೆಯಲ್ಲಿ ಮೂತ್ರ ನೆಕ್ಕಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅರ್ಜುನ್‌ ಅವರನ್ನು ಬೆಂಗಳೂರಿನಲ್ಲಿ ಸಿಐಡಿ ಪೊಲೀಸರು ಬುಧವಾರ ಬಂಧಿಸಿದ್ದರು.

ADVERTISEMENT

ವಿಚಾರಣೆ ನಿಟ್ಟಿನಲ್ಲಿ ಅರ್ಜುನ್‌ ಅವರನ್ನು ವಶಕ್ಕೆ ನೀಡುವಂತೆ ಸಿಐಡಿ ಪೊಲೀಸರು ಕೋರ್ಟ್‌ಗೆ ಕೋರಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.