ಚಿಕ್ಕಮಗಳೂರು: ನಗರದ ಹೊರವಲಯದಲ್ಲಿನ ರಾಂಪುರದ ಶ್ರೀನಿವಾಸನಗರ ನಿವಾಸಿ ಕೂಲಿಕಾರ ಪಿ.ಆರ್.ಶರತ್ಕುಮಾರ್ (30) ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಟ ಪುನೀತ್ ರಾಜ್ಕುಮಾರ್ ಸಾವಿನಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.
ಶರತ್ ಅವರು ಮನೆಯ ಬೆಡ್ ರೂಂನಲ್ಲಿ ಫ್ಯಾನಿಗೆ ಸೀರೆ ಬಿಗಿದು ನೇಣು ಹಾಕಿಕೊಂಡಿದ್ದಾರೆ. ಮಧ್ಯಾಹ್ನ 3 ಗಂಟೆ ಹೊತ್ತಿನಲ್ಲಿ ಅವಘಡ ನಡೆದಿದೆ.
‘ಪುನೀತ್ ಅವರು ಮೃತಪಟ್ಟಾಗಿನಿಂದ ಶರತ್ ಮಂಕಾಗಿದ್ದರು. ಟಿ.ವಿ ಯಲ್ಲಿ ಪುನೀತ್ ಪಾರ್ಥಿವ ಶರೀರ ನೋಡಿ ಭಾವತೀವ್ರತೆ ಒಳಗಾಗಿ ರೋದಿಸಿದ್ದರು. ಅಳುವುದನ್ನು ನಿಲ್ಲಿಸುವಂತೆ ಕುಟುಂಬದವರು ಹೇಳಿದರೂ ಕೇಳಿಲ್ಲ. ಶನಿವಾರ ಮಧ್ಯಾಹ್ನ 3 ಗಂಟೆ ಹೊತ್ತಿನಲ್ಲಿ ಬೆಡ್ ರೂಂನಲ್ಲಿ ಶರತ್ ನೇಣು ಹಾಕಿಕೊಂಡಿದ್ದಾರೆ ಎಂದು ಕುಟುಂಬದವರು ತಿಳಿಸಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.
ಶರತ್ ಅವರಿಗೆ ಒಬ್ಬ ಪುತ್ರಿ ಇದ್ದಾರೆ. ಪತ್ನಿ ಎಂಟು ತಿಂಗಳ ಗರ್ಭಿಣಿ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.