ADVERTISEMENT

ಚಿಕ್ಕಮಗಳೂರು: ಲಾರಿ – ಬಸ್‌ ಮುಖಾಮುಖಿ ಡಿಕ್ಕಿ, ಪ್ರಯಾಣಿಕರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2018, 12:07 IST
Last Updated 17 ಅಕ್ಟೋಬರ್ 2018, 12:07 IST
   

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಹಾಂದಿ ಗ್ರಾಮದ ಬಳಿ ಲಾರಿ, ಕೆಎಸ್ಆರ್‌ಟಿಸಿ ಬಸ್ಸು ಮುಖಾಮುಖಿ ಡಿಕ್ಕಿಯಾಗಿ, ಬಸ್ಸಿನಲ್ಲಿದ್ದ 20 ಮಂದಿ ಗಾಯಗೊಂಡಿದ್ದಾರೆ.

ಬಸ್ ಚಾಲಕ ತೀವ್ರವಾಗಿಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಬಸ್ಸು ದಾವಣಗೆರೆಯಿಂದ ಧರ್ಮಸ್ಥಳಕ್ಕೆ ತೆರಳುತ್ತಿತ್ತು. ಮೂಡಿಗೆರೆಯಿಂದ ಚಿಕ್ಕಮಗಳೂರಿಗೆ ಲಾರಿ ಚಲಿಸುತ್ತಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.