ADVERTISEMENT

ಕಡೂರು: ಆರ್.ಎಸ್.ಎಸ್. ಪಥಸಂಚಲನ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2022, 4:40 IST
Last Updated 3 ಅಕ್ಟೋಬರ್ 2022, 4:40 IST
ಕಡೂರಿನಲ್ಲಿ ಆರ್.ಎಸ್.ಎಸ್.ಸ್ವಯಂ ಸೇವಕರ ಆಕರ್ಷಕ ಪಥ ಸಂಚಲನ ನಡೆಯಿತು
ಕಡೂರಿನಲ್ಲಿ ಆರ್.ಎಸ್.ಎಸ್.ಸ್ವಯಂ ಸೇವಕರ ಆಕರ್ಷಕ ಪಥ ಸಂಚಲನ ನಡೆಯಿತು   

ಕಡೂರು: ವಿಜಯದಶಮಿ ಅಂಗವಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸ್ವಯಂಸೇವಕರು ಕಡೂರು ಪಟ್ಟಣದಲ್ಲಿ ಭಾನುವಾರ ಗಣವೇಷ ಧರಿಸಿ ಪಥಸಂಚಲನ ನಡೆಸಿದರು.

ಪಟ್ಟಣದ ಕೋರ್ಟ್ ಗಣಪತಿ ದೇವಾಲಯದಿಂದ ಆರಂಭವಾದ ಪಥಸಂಚಲನ, ದೊಡ್ಡಪೇಟೆ, ಬಿ.ಎಚ್. ರಸ್ತೆ, ಜೆ.ಟಿ. ರಸ್ತೆ, ಕದಂಬವೃತ್ತ, ಹಳೇಪೇಟೆ, ತ್ಯಾಗರಾಜನಗರ ಮಾರ್ಗವಾಗಿ ಗಣಪತಿ ಪೆಂಡಾಲ್ ಆವರಣದವರೆಗೆ ಸಾಗಿ ಮುಕ್ತಾಯಗೊಂಡಿತು. ಪಥಸಂಚಲನದಲ್ಲಿ ಘೋಷವಾದ್ಯ ಗಮನ ಸೆಳೆಯಿತು.

ಅಲಂಕೃತ ಆಟೋದಲ್ಲಿದ್ದ ಡಾ.ಹೆಡ್ಗೆವಾರ್ ಮತ್ತು ಗೋಳ್ವಾಲ್ಕರ್ ಭಾವಚಿತ್ರಕ್ಕೆ ನಾಗರಿಕರು ಪುಷ್ಪಾರ್ಚನೆ ಸಲ್ಲಿಸಿದರು. ನಂತರ ಗಣಪತಿ ಪೆಂಡಾಲ್ ಆವರಣದಲ್ಲಿ ನಡೆದ ಸಮಾರೋಪ ಕಾರ್ಯಕ್ರಮದಲ್ಲಿ ಹಾಸನ ವಿಭಾಗ ಕಾರ್ಯಕಾರಿಣಿ ಸದಸ್ಯ ನರೇಂದ್ರ ವಿಶೇಷ ಬೌದ್ಧಿಕ್ ನೆರವೇರಿಸಿದರು. ಲಕ್ಷಾ ಗ್ರೂಪ್ಸ್ ಮಾಲೀಕ ಡಿ. ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಬೆಳ್ಳಿಪ್ರಕಾಶ್ ಭಾಗವಹಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.