ADVERTISEMENT

ಚಿಕ್ಕಮಗಳೂರು: ಯಾರಿಗೋ ಹಾರಿಸಲು ಹೋದ ಗುಂಡು ಇನ್ನಾರಿಗೊ! ಅಮಾಯಕರಿಬ್ಬರ ಸಾವು

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2023, 9:30 IST
Last Updated 20 ಫೆಬ್ರುವರಿ 2023, 9:30 IST
ಬಿದಿರೆಯ ಪ್ರವೀಣ್‌ (24) ಹಾಗೂ ಪ್ರಕಾಶ್‌ (25) ಮೃತಪಟ್ಟವರು
ಬಿದಿರೆಯ ಪ್ರವೀಣ್‌ (24) ಹಾಗೂ ಪ್ರಕಾಶ್‌ (25) ಮೃತಪಟ್ಟವರು   

ಚಿಕ್ಕಮಗಳೂರು: ಚಿಕ್ಕಮಗಳೂರು ತಾಲ್ಲೂಕಿನ ಬಿದಿರೆಯ ಬಳಿ ಬೈಕಿನಲ್ಲಿ ಸಾಗುವಾಗ ಗುಂಡು ತಗುಲಿ ಬೈಕ್‌ ಸವಾರರಿಬ್ಬರು ಸಾವಿಗೀಡಾಗಿದ್ದಾರೆ.

ಗುಂಡು ಹಾರಿಸಿದ ಆರೋಪಿ ರಮೇಶ್‌ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಿದಿರೆಯ ಪ್ರವೀಣ್‌ (24) ಹಾಗೂ ಪ್ರಕಾಶ್‌ (25) ಮೃತಪಟ್ಟವರು. ಇಬ್ಬರು ಸಂಬಂಧಿಕರು. ಬೆಳಿಗ್ಗೆ 9.45ರ ಹೊತ್ತಿನಲ್ಲಿ ಘಟನೆ ನಡೆದಿದೆ.

ADVERTISEMENT

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಉಮಾ ಪ್ರಶಾಂತ್‌, ಬಾಳೆಹೊನ್ನೂರು ಠಾಣೆ ಪೊಲೀಸರು ಘಟನಾ ಸ್ಥಳ ಪರಿಶೀಲನೆ ಮಾಡಿದ್ದಾರೆ.
‘ಅಂಗನವಾಡಿಗೆ ಮಕ್ಕಳನ್ನು ಕರೆದೊಯ್ಯಲು ಹೋಗುತ್ತಿದ್ದ ಸಹಾಯಕಿಯನ್ನು ರಮೇಶ್‌ ಅಡ್ಡಗಟ್ಟಿದ್ದಾರೆ.

ಆ ಮಹಿಳೆಗೆ ಬಂದೂಕು ತೋರಿಸಿ ಕೊಲ್ಲುವುದಾಗಿ ಹೇಳಿದ್ದಾರೆ. ಅವರು ಹಾರಿಸಿದ ಗುಂಡು ಬೈಕ್‌ನಲ್ಲಿ ಸಾಗುತ್ತಿದ್ದವರಿಗೆ (ಒಬ್ಬರಿಗೆ ಎದೆ ಭಾಗ, ಮತ್ತೊಬ್ಬರಿಗೆ ಭುಜ) ತಗುಲಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ, ಅಷ್ಟರಲ್ಲಿ ಮೃತಪಟ್ಟಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ರಮೇಶ್☝️

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.