ADVERTISEMENT

ಹುತಾತ್ಮ ಯೋಧರಿಗೆ ಸಾರ್ವಜನಿಕರಿಂದ ಶ್ರದ್ಧಾಂಜಲಿ

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2019, 15:56 IST
Last Updated 15 ಫೆಬ್ರುವರಿ 2019, 15:56 IST
ಭಾರತೀ ಜಾಗೃತ ಪ್ರತಿಷ್ಠಾನದ ಸದಸ್ಯರು ಮೊಂಬತ್ತಿ ಹಿಡಿದು ಮೆರವಣಿಗೆ ನಡೆಸಿದರು.
ಭಾರತೀ ಜಾಗೃತ ಪ್ರತಿಷ್ಠಾನದ ಸದಸ್ಯರು ಮೊಂಬತ್ತಿ ಹಿಡಿದು ಮೆರವಣಿಗೆ ನಡೆಸಿದರು.   

ಚಿಕ್ಕಮಗಳೂರು: ಜಮ್ಮು ಕಾಶ್ಮೀರದಲ್ಲಿ ಉಗ್ರರ ಆತ್ಮಾಹುತಿ ದಾಳಿಯಲ್ಲಿ ಹುತಾತ್ಮರಾದ ಸಿಆರ್‌ಪಿಎಫ್ ಯೋಧರಿಗೆ ಭಾರತೀ ಜಾಗೃತ ಪ್ರತಿಷ್ಠಾನದ ವತಿಯಿಂದ ಶುಕ್ರವಾರ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ನಗರದ ಓಕಾರೇಶ್ವರ ದೇಗುಲದ ಬಳಿ ಜಮಾಯಿಸಿದ ಸಂಘದ ಸದಸ್ಯರು, ವಿದ್ಯಾರ್ಥಿಗಳು, ಮಹಿಳೆಯರು ಮೊಂಬತ್ತಿ ಹಿಡಿದು ಹನುಮಂತಪ್ಪ ವೃತ್ತದಲ್ಲಿ ಮಾನವ ಸರಪಳಿ ರಚಿಸಿದರು. ನಂತರ ಎಂ.ಜಿ.ರಸ್ತೆ ಮೂಲಕ ಆಜಾದ್ ಪಾರ್ಕ್‌ ವೃತ್ತದವರೆಗೆ ಮೌನ ಮೆರವಣಿಗೆ ನಡೆಸಿದರು.

ಮೆರವಣಿಗೆ ಸಾಗುವ ರಸ್ತೆಯಲ್ಲಿ ಅಂಗಡಿಗಳ್ಳಿನ ವಿದ್ಯುತ್‌ದೀಪ ಆರಿಸುವ ಮೂಲಕ ಅಂಗಡಿ ಮಾಲೀಕರು ಹುತಾತ್ಮ ಯೋಧರಿಗೆ ಗೌರವ ಸಮರ್ಪಿಸಿದರು.

ADVERTISEMENT

ಸಂಘಟನೆ ಸದಸ್ಯರು, ಸಾರ್ವಜನಿಕರು ಆಜಾದ್ ಪಾರ್ಕ್‌ ವೃತ್ತದಲ್ಲಿ ಹುತಾತ್ಮ ಯೋಧರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಿದರು.
ಬಜರಂಗದಳದ ಜಿಲ್ಲಾ ಸಂಚಾಲಕ ತುಡುಕೂರು ಮಂಜು, ಡಾ.ಗೀತಾವೆಂಕಟೇಶ್, ವೀಣಾ ಶೆಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.