ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯದ ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ ಮತ್ತು ಟೂರಿಸಂ ಮತ್ತು ಇಂಟೀರಿಯರ್ ಡಿಸೈನ್ ವಿಭಾಗದ ಸಿಟಿ ಕ್ಯಾಂಪಸ್ನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಿಸಲಾಯಿತು.
ವಿಶ್ವವಿದ್ಯಾಲಯದ ಕುಲಾಧಿಪತಿ ಡಾ.ಸಿಎ ಎ.ರಾಘವೇಂದ್ರ ರಾವ್ ಅಧ್ಯಕ್ಷತೆ ವಹಿಸಿದ್ದರು. ಸಹ-ಕುಲಾಧಿಪತಿ ಡಾ. ಎ.ಶ್ರೀನಿವಾಸ್ ರಾವ್ ಮುಖ್ಯ ಅತಿಥಿ
ಯಾಗಿದ್ದರು. ಅಭಿವೃದ್ಧಿ ರಿಜಿಸ್ಟ್ರಾರ್ ಡಾ.ಅಜಯ್ ಕುಮಾರ್, ಡೀನ್ಗಳಾದ ಪ್ರೊ.ಸ್ವಾಮಿನಾಥನ್ ಎಸ್., ಡೀನ್ ಡಾ.ಎಸ್.ರಾಜಶೇಖರ್, ಸಿಬ್ಬಂದಿ ಉಪಸ್ಥಿತರಿದ್ದರು. ತುಳುನಾಡಿನ ಹುಲಿ ನೃತ್ಯ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು. ಮೊಸರು ಕುಡಿಕೆ ಹೊಡೆಯಲಾಯಿತು. ವಿದ್ಯಾರ್ಥಿಗಳಿಂದ ನೃತ್ಯ ಪ್ರದರ್ಶನ ನಡೆಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.