ಚಿಕ್ಕಮಗಳೂರು: ‘ದೇಶದ ಪ್ರಧಾನಿ ಮೋದಿ ಬಗ್ಗೆ ಮಾತನಾಡಿದ್ದಕ್ಕೆ ಮೊದಲು ಸಿದ್ದರಾಮಯ್ಯ ಕ್ಷಮೆಯಾಚಿಸಲಿ’ ಎಂದು ಶಾಸಕ ಸಿ.ಟಿ. ರವಿ ಪ್ರತಿಕ್ರಿಯಿಸಿದರು.
‘ಮೋದಿ ಅವರು ಹೆಬ್ಬೆಟ್ಟು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಜಗತ್ತಿನ ಬಹುತೇಕ ದೇಶಗಳಲ್ಲಿ ಮೋದಿ ಅವರನ್ನು ಜನರು ಗುರುತಿಸುತ್ತಾರೆ. ಸಿದ್ದರಾಮಯ್ಯ ಅವರನ್ನು ಕರ್ನಾಟಕದಿಂದ ಆಚೆಗೆ ಯಾರು ಗುರುತಿಸುತ್ತಾರೆ’ ಎಂದು ಪ್ರಶ್ನಿಸಿದರು.
‘ನಾನು ಟ್ವೀಟ್ ಮಾಡಿರುವುದು ತಪ್ಪು ಅನಿಸಿದರೆ, ಸಿದ್ದರಾಮಯ್ಯ ಅವರು ಬಸವರಾಜ ಬೊಮ್ಮಾಯಿ ಹಾಕಿದ ಕಂಬಳಿ ಬಗ್ಗೆ ಮಾತಾಡಿದ್ದು ತಪ್ಪು ಅನಿಸಿರಬೇಕಿತ್ತು’ ಎಂದರು.
‘ಅವರು ಭಾವಿಸಿರುವಂತೆ ನಾನು ಆರೋಪ ಮಾಡಿಲ್ಲ. ಕುರುಬ ಸಮುದಾಯದ ಬಗ್ಗೆಯೂ ಮಾತನಾಡಿಲ್ಲ. ಕುರುಬರು ನನ್ನ ಜೊತೆಗೇ ಇದ್ದಾರೆ. ಸಂಗೊಳ್ಳಿ ರಾಯಣ್ಣ, ಕನಕದಾಸರ ಬಗ್ಗೆ ನಂಬಿಕೆ ಇಟ್ಟಿರುವವರು ಹಿಂದುತ್ವದ ಬಗ್ಗೆಯೂ ನಂಬಿಕೆ ಇಟ್ಟಿರುತ್ತಾರೆ’ ಎಂದು ಪ್ರತಿಪಾದಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.