ADVERTISEMENT

ಮಗನಿಂದ ತಂದೆಯ ಕೊಲೆ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2020, 4:05 IST
Last Updated 19 ಸೆಪ್ಟೆಂಬರ್ 2020, 4:05 IST

ಕೊಟ್ಟಿಗೆಹಾರ: ಬಣಕಲ್ ಸಮೀಪದ ಬೆಳಗೋಡಿನಲ್ಲಿ ವ್ಯಕ್ತಿಯೊಬ್ಬ ಮದ್ಯ ಕುಡಿದ ಅಮಲಿನಲ್ಲಿ ತಂದೆಯನ್ನೇ ಕೊಲೆ ಘಟನೆ ಗುರುವಾರ ರಾತ್ರಿ ನಡೆದಿದೆ.

ಬೆಳಗೋಡಿನ ಬಾಸಯ್ಯ (62) ಮೃತರು. ಅವರ ಪುತ್ರ ಮಂಜುನಾಥ್ ಕ್ಷುಲ್ಲಕ ಕಾರಣಕ್ಕಾಗಿ ತಂದೆಯೊಂದಿಗೆ ಜಗಳವಾಡಿದ್ದು, ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ್ದಾನೆ. ಪೊಲೀಸರು ಆರೋಪಿ ಮಂಜುನಾಥ್‍ನನ್ನು ಬಂಧಿಸಿ, ಪ್ರಕರಣ ದಾಖಲಿಸಿದ್ದಾರೆ.

ಬಣಕಲ್ ಸಬ್‍ಇನ್‍ಸ್ಪೆಕ್ಟರ್ ಶ್ರೀನಾಥ್ ರೆಡ್ಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.