ಪ್ರಜಾವಾಣಿ ವಾರ್ತೆ
ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ತಾಲ್ಲೂಕಿನ 15 ವರ್ಷದ ಬಾಲಕಿಯ ಸತತ ಅತ್ಯಾಚಾರ ಪ್ರಕರಣದ ಬೆನ್ನತ್ತಿರುವ ಪೊಲೀಸರು ಭಾನುವಾರ ಮತ್ತೆ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.
ಈಗ ಐವರನ್ನು ವಶಕ್ಕೆ ಪಡೆದಂತಾಗಿದೆ. ಪ್ರಸನ್ನ, ವೆಂಕಟೇಶ, ಸಾಗರ, ಸುಗಮ್ , ಅಭಿಷೇಕ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಎನ್.ಶ್ರುತಿ ಅವರ ನೇತೃತ್ವದಲ್ಲಿ ನಾಲ್ಕು ತಂಡಗಳು ಆರೋಪಿಗಳ ಶೋಧದಲ್ಲಿ ತೊಡಗಿವೆ. ಫೋನ್ ಕರೆ ವಿವರ, ಸಂಪರ್ಕ ಜಾಲ, ಸ್ಥಳೀಯರಿಂದ ಮಾಹಿತಿ ಆಧರಿಸಿ ಆರೋಪಿಗಳ ಜಾಡು ಪತ್ತೆಯಲ್ಲಿ ತೊಡಗಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.