ADVERTISEMENT

ಉಡೇವಾ: ಅಕ್ಷರ ದಾಸೋಹ ಭವನಕ್ಕೆ ಭೂಮಿಪೂಜೆ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2022, 4:26 IST
Last Updated 3 ಅಕ್ಟೋಬರ್ 2022, 4:26 IST
 ಉಡೇವಾ ಗ್ರಾಮದಲ್ಲಿ ಅಕ್ಷರ ದಾಸೋಹ ಭವನ ಕಟ್ಟಡಕ್ಕೆ ಶಾಸಕ ಡಿ.ಎಸ್.ಸುರೇಶ್ ಭೂಮಿಪೂಜೆ ನೆರವೇರಿಸಿದರು
 ಉಡೇವಾ ಗ್ರಾಮದಲ್ಲಿ ಅಕ್ಷರ ದಾಸೋಹ ಭವನ ಕಟ್ಟಡಕ್ಕೆ ಶಾಸಕ ಡಿ.ಎಸ್.ಸುರೇಶ್ ಭೂಮಿಪೂಜೆ ನೆರವೇರಿಸಿದರು   

ತರೀಕೆರೆ: ರಸ್ತೆ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಮೂಲ ಸೌಲಭ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಶಾಸಕ ಡಿ.ಎಸ್. ಸುರೇಶ್ ಹೇಳಿದರು.

ಉಡೇವಾ ಗ್ರಾಮದಲ್ಲಿ ₹16 ಲಕ್ಷ ವೆಚ್ಚದ ಅಕ್ಷರದಾಸೋಹ ಕಟ್ಟಡಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಉಡೇವಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ₹ 10 ಲಕ್ಷ ಅನುದಾನದ ಘನತಾಜ್ಯ ಘಟಕ ಮತ್ತು ₹ 3 ಲಕ್ಷದಲ್ಲಿ ಉಡೇವಾ ಗ್ರಾಮದ ಈಶ್ವರ ಸ್ವಾಮಿ ದೇವಾಲಯದ ಸಮುದಾಯ ಭವನ ನಿರ್ಮಾಣ ಮಾಡಲಾಗಿದೆ ಎಂದರು.

ADVERTISEMENT

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾರತಿ ಸಿ. ರಾಜಪ್ಪ ಮಾತನಾಡಿದರು.

ತಾಲ್ಲೂಕು ಪಂಚಾಯಿತಿ ಇಒ ಗೀತಾಶಂಕರ್, ಉಡೇವಾ ಗ್ರಾಮ ಪಂಚಾಯಿತಿ ಪಿಡಿಒ ಸಿದ್ದಮ್ಮ, ಕಾರ್ಯದರ್ಶಿ ಬಿ.ಮಂಜನಾಯ್ಕ, ಉಪಾಧ್ಯಕ್ಷೆ ಸುಚಿತ್ರಾ ಸಂತೋಷ್, ಗ್ರಾಮ ಪಂಚಾಯಿತಿ ಸದಸ್ಯರು, ಸಿಡಿಪಿಒ ಜ್ಯೋತಿಲಕ್ಷ್ಮೀ, ಬಿಜೆಪಿ ಮಂಡಲ ಅಧ್ಯಕ್ಷ ಬಿ.ಮಂಜಪ್ಪ, ಗುತ್ತಿಗೆದಾರ ಶಿವಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.