ADVERTISEMENT

ಹೆಂಡತಿ ತಲೆ ಕಡಿದ ಆರೋಪಿ ಕಾರಗೃಹದಲ್ಲಿ ಆತ್ಮಹತ್ಯೆಗೆ ಯತ್ನ

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2018, 14:35 IST
Last Updated 24 ಡಿಸೆಂಬರ್ 2018, 14:35 IST

ಚಿಕ್ಕಮಗಳೂರು: ನಗರದ ಜಿಲ್ಲಾ ಕಾರಾಗೃಹದಲ್ಲಿ ಆರೋಪಿ ಸತೀಶ ಭಾನುವಾರ ರಾತ್ರಿ ಆತ್ಮ ಹತ್ಯೆಗೆ ಯತ್ನಿಸಿದ್ದಾನೆ.
ರಾತ್ರಿ 11.30ರವೇಳೆಗೆ ವುಲ್ಲನ್ ಸ್ವೆಟರ್ ಮತ್ತು ಟೊಪ್ಪಿಯಿಂದ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಕಾರಾಗೃಹ ಸಿಬ್ಬಂದಿ ಆತನನ್ನು ಜಿಲ್ಲಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿತ್ತು. ವೈದ್ಯರ ಶಿಫಾರಸಿನಂತೆ ಸತೀಶನನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ಸೋಮವಾರ ದಾಖಲು ಮಾಡಲಾಗಿದೆ.

ಹೆಂಡತಿ ತಲೆ ಕಡಿದು, ಅಜ್ಜಂಪುರ ಪೊಲೀಸ್ ಠಾಣೆಗೆ ಚೀಲದಲ್ಲಿ ತಂದು ಸತೀಶ ಶರಣಗಾತನಾಗಿದ್ದ. ಆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.