ADVERTISEMENT

ನಿವೃತ್ತ ಶಿಕ್ಷಕ ನಟರಾಜ್‌ಗೆ ಬೀಳ್ಕೊಡುಗೆ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2019, 11:09 IST
Last Updated 3 ಆಗಸ್ಟ್ 2019, 11:09 IST
ಅಜ್ಜಂಪುರ ಸಮೀಪ ಅತ್ತಿಗಟ್ಟೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕರಾಗಿ ನಿವೃತ್ತಿಯಾದ ಎನ್.ಒ. ನಟರಾಜ್ ಅವರನ್ನು ತಾಲ್ಲೂಕು ಶಿಕ್ಷಕರ ಸಂಘ ಅಧ್ಯಕ್ಷ ಸಿ.ಆರ್. ಅನಂತಪ್ಪ ಹಾಗೂ ಪದಾಧಿಕಾರಿಗಳು ಸನ್ಮಾನಿಸಿ ಬೀಳ್ಕೊಟ್ಟರು.
ಅಜ್ಜಂಪುರ ಸಮೀಪ ಅತ್ತಿಗಟ್ಟೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕರಾಗಿ ನಿವೃತ್ತಿಯಾದ ಎನ್.ಒ. ನಟರಾಜ್ ಅವರನ್ನು ತಾಲ್ಲೂಕು ಶಿಕ್ಷಕರ ಸಂಘ ಅಧ್ಯಕ್ಷ ಸಿ.ಆರ್. ಅನಂತಪ್ಪ ಹಾಗೂ ಪದಾಧಿಕಾರಿಗಳು ಸನ್ಮಾನಿಸಿ ಬೀಳ್ಕೊಟ್ಟರು.   

ಅಜ್ಜಂಪುರ: ದೇಶದ ಮುಂದಿನ ಪ್ರಜೆಗಳನ್ನು ರೂಪಿಸುವ ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದುದು. ಸೇವಾವಧಿಯಲ್ಲಿ ಮಕ್ಕಳಿಗೆ ಉತ್ತಮವಾಗಿ ಶಿಕ್ಷಣ ಕಲಿಸಿದ ತೃಪ್ತಿ ಇದೆ ಎಂದು ನಿವೃತ್ತ ಶಿಕ್ಷಕ ಎನ್.ಒ. ನಟರಾಜ್ ಹೇಳಿದರು.

ಪಟ್ಟಣ ಸಮೀಪದ ಅತ್ತಿಗಟ್ಟೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕರಾಗಿ ನಿವೃತ್ತಿಯಾದ ಅವರಿಗೆ ಶಿಕ್ಷಕರ ಸಂಘ, ಸರ್ಕಾರಿ ನೌಕರರ ಸಂಘ, ಜಿಲ್ಲಾ ಪ್ರಾಥಮಿಕ ಶಿಕ್ಷಕರ ಸಂಘ ಹಾಗೂ ಗ್ರಾಮಸ್ಥರು ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ತಾಲ್ಲೂಕು ಶಿಕ್ಷಕರ ಸಂಘ ಅಧ್ಯಕ್ಷ ಸಿ.ಆರ್.ಅನಂತಪ್ಪ, ಪದಾಧಿಕಾರಿಗಳಾದ ರಾಮಚಂದ್ರಪ್ಪ, ಶಿವಕುಮಾರ, ಪರಮೇಶ್ವರಪ್ಪ, ಪುಟ್ಟಸ್ವಾಮಿ, ಶೈಲಜಾ, ಶೋಭಾ, ರವಿ, ಕುಮಾರಸ್ವಾಮಿ, ಓಂಕಾರಪ್ಪ, ಶಶಿಧರ್, ಗ್ರಾಮಸ್ಥರು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.