ADVERTISEMENT

ಅತ್ಯಾಚಾರ: ಅರ್ಚಕನ ವಿರುದ್ಧ ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2026, 3:13 IST
Last Updated 4 ಫೆಬ್ರುವರಿ 2026, 3:13 IST
<div class="paragraphs"><p>ಅತ್ಯಾಚಾರ</p></div>

ಅತ್ಯಾಚಾರ

   

ಸಾಂದರ್ಭಿಕ ಚಿತ್ರ

ಮೂಡಿಗೆರೆ: ಮದುವೆಗಾಗಿ ಜಾತಕ ತೋರಿಸಲು ಬಂದ ಯುವತಿಯ ಮೇಲೆ ಅತ್ಯಾಚಾರ ಎಸಗಿರುವ ಆರೋಪದಲ್ಲಿ ದೇವಾಲಯದ ಅರ್ಚಕನ ವಿರುದ್ಧ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

23 ವರ್ಷದ ಯುವತಿ ತಮ್ಮ ವಿವಾಹದ ಸಂಬಂಧ ಅರ್ಚಕನಿಗೆ ಜಾತಕ ತೋರಿಸಲು ಹೋಗಿದ್ದಾಗ ಜಾತಕದಲ್ಲಿ ದೋಷವಿದೆ ಎಂದು ಹೇಳಿದ್ದರು. 2025ರ ನವೆಂಬರ್ 23 ರಿಂದ 2026ರ ಫೆ.2 ರವರೆಗೆ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಆರೋಪಿ ಕೃಷ್ಣರಾವ್ ವಿರುದ್ಧ ಅತ್ಯಾಚಾರ ಮತ್ತು ಎಸ್‌ಸಿಎಸ್‌ಟಿ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.