ADVERTISEMENT

ಹುಲಿ ಉಗುರು ಮಾರಾಟ ಯತ್ನ: ಇಬ್ಬರ ಬಂಧನ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2021, 5:21 IST
Last Updated 1 ಮಾರ್ಚ್ 2021, 5:21 IST
ವಶಪಡಿಸಿಕೊಂಡಿರುವ ಹುಲಿ ಉಗುರುಗಳು, ಹಲ್ಲುಗಳು
ವಶಪಡಿಸಿಕೊಂಡಿರುವ ಹುಲಿ ಉಗುರುಗಳು, ಹಲ್ಲುಗಳು   

ಚಿಕ್ಕಮಗಳೂರು: ನಗರದ ರೈಲ್ವೆ ನಿಲ್ದಾಣ ರಸ್ತೆಯಲ್ಲಿ ಹುಲಿ ಉಗುರು, ಹಲ್ಲು ಮಾರಾಟ ಯತ್ನದಲ್ಲಿ ತೊಡಗಿದ್ದ ಇಬ್ಬರನ್ನು ಬಂಧಿಸಿ, ಮಾಲು ವಶಪಡಿಸಿಕೊಳ್ಳಲಾಗಿದೆ.

ಹಾಸನ ತಾಲ್ಲೂಕಿನ ಅಂಬುಗ ಗ್ರಾಮದ ಎಸ್‌.ಲೋಕೇಶ್, ಚಿಕ್ಕಮಗಳೂರು ತಾಲ್ಲೂಕಿನ ಅರಿಸಿನಗುಪ್ಪೆಯ ಸಾಗರ್‌ ಬಂಧಿತರು. ಎಂಟು ಉಗುರುಗಳು, ಚರ್ಮದ ತುಣುಕು, ಒಂದು ಕೋರೆ ಹಲ್ಲು, ನಾಲ್ಕು ಹಲ್ಲುಗಳು, ಕೃತ್ಯಕ್ಕೆ ಬಳಸಿ ವಶಪಡಿಸಿಕೊಳ್ಳಲಾಗಿದೆ.

ಡಿಸಿಐಬಿ ವಿಭಾಗದ ಇನ್‌ಸ್ಪೆಕ್ಟರ್‌ ಕೆ.ಸತ್ಯನಾರಾಯಣ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದೆ.

ADVERTISEMENT

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.