ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮುಂಜಾಗ್ರತ ಕ್ರಮವಾಗಿ ಕಳಸ, ಶೃಂಗೇರಿ ತಾಲ್ಲೂಕು ಹಾಗೂ ಮೂಡಿಗೆರೆ ತಾಲ್ಲೂಕಿನ ಬಾಳೂರು ಹೋಬಳಿ ವ್ಯಾಪ್ತಿಯ ಶಾಲೆಗಳಿಗೆ ಜು.5 ಮತ್ತು 6 ರಂದು ರಜೆ ಘೋಷಿಸಲಾಗಿದೆ.
ಭಾರಿ ಮಳೆಯಿಂದಾಗಿ ಹಳ್ಳ, ನದಿ, ಜಲಮೂಲಗಳು ತುಂಬಿ ಹರಿಯತ್ತಿವೆ. ಸುರಕ್ಷತೆ ದೃಷ್ಟಿಯಿಂದ ಎರಡು ದಿನ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಆದೇಶದಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.