ADVERTISEMENT

ಚಿಕ್ಕಮಗಳೂರು: ಯುವ ಕಾಂಗ್ರೆಸ್‌ ಜಿಲ್ಲಾ ಘಟಕದ ಸಭೆಯಲ್ಲಿ 2 ಗುಂಪುಗಳ ಹೊಡೆದಾಟ

ಕಾಂಗ್ರೆಸ್‌ ಜಿಲ್ಲಾ ಕಚೇರಿಯಲ್ಲಿ ಏರ್ಪಾಡಾಗಿದ್ದ ಸಭೆ

​ಪ್ರಜಾವಾಣಿ ವಾರ್ತೆ
Published 24 ಜುಲೈ 2022, 16:13 IST
Last Updated 24 ಜುಲೈ 2022, 16:13 IST
ಚಿಕ್ಕಮಗಳೂರು: ಯುವ ಕಾಂಗ್ರೆಸ್‌ ಜಿಲ್ಲಾ ಘಟಕದ ಸಭೆಯಲ್ಲಿ 2 ಗುಂಪುಗಳ ಹೊಡೆದಾಟ
ಚಿಕ್ಕಮಗಳೂರು: ಯುವ ಕಾಂಗ್ರೆಸ್‌ ಜಿಲ್ಲಾ ಘಟಕದ ಸಭೆಯಲ್ಲಿ 2 ಗುಂಪುಗಳ ಹೊಡೆದಾಟ   

ಚಿಕ್ಕಮಗಳೂರು: ಕಾಂಗ್ರೆಸ್‌ ಜಿಲ್ಲಾ ಘಟಕದ ಕಚೇರಿಯಲ್ಲಿ ಏರ್ಪಾಡಾಗಿದ್ದ ಸಭೆಯಲ್ಲಿ ಕಾಂಗ್ರೆಸ್‌ ಯುವ ಜಿಲ್ಲಾ ಘಟಕದ ಕೆಲವರು ಕೈಕೈ ಮಿಲಾಯಿಸಿ ಹೊಡೆದಾಡಿದ್ದಾರೆ. ಯುವ ಘಟಕದ ಜಿಲ್ಲಾಧ್ಯಕ್ಷ ಕೆ.ಎಂ.ಸಂತೋಷ್‌ ಮತ್ತು ನಿತೀಶ್‌ ನಡುವೆ ಜಗಳವಾಗಿದೆ.

ಹೊಡೆದಾಟದ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರದಾಡಿದೆ. ಕುರ್ಚಿಗಳನ್ನು ಬಿಸಾಕಿ, ಗುದ್ದಾಡಿದ್ದಾರೆ.

ಯುವ ಕಾಂಗ್ರೆಸ್‌ ಜಿಲ್ಲಾ ಘಟಕದ ಕಾರ್ಯದರ್ಶಿ ಸ್ಥಾನದಿಂದ ನಿತೀಶ್‌ ಅವರನ್ನು ಅಮಾನತು ಮಾಡಿದ್ದಕ್ಕೆ ಜಗಳ ವಾಡಿದ್ದಾರೆ ಎಂದು ಕಾಂಗ್ರೆಸ್‌ ಮೂಲಗಳ ತಿಳಿಸಿವೆ.

ADVERTISEMENT

ಸಂತೋಷ್‌ ‘ಪ್ರಜಾವಾಣಿ’ಯೊಂದಿಗೆ ಮಾತನಾಡಿ, ‘ಯುವ ಘಟಕದ ರಾಜ್ಯ ಘಟಕದ ಅಧ್ಯಕ್ಷ ನಲಪ್ಪಾಡ್‌ ಅವರ ಸೂಚನೆ ಮೇರೆಗೆ ಅವರನ್ನು ಕಾರ್ಯದರ್ಶಿ ಸ್ಥಾನದಿಂದ ನಿತೀಶ್‌ ಅವರನ್ನು ರಾಜ ಘಟಕದ ಪ್ರಧಾನ ಕಾರ್ಯದರ್ಶಿ ಅಮಾನತು ಮಾಡಿದ್ದಾರೆ. ಅಮಾನತು ಮಾಡಿರುವುದಕ್ಕೂ ನನಗೂ ಸಂಬಂಧ ಇಲ್ಲ. ಪಕ್ಷದ ಕಚೇರಿಯಲ್ಲಿ ಸಭೆ ನಡೆಯುವಾಗ ಏಕಾಏಕಿ ಕಚೇರಿಗೆ ನುಗ್ಗಿ ಹಲ್ಲೆ ಮಾಡಿದ್ದಾರೆ. ಈ ಬಗ್ಗೆ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.