ಮೂಡಿಗೆರೆ: ತಾಲ್ಲೂಕಿನ ಬೆಟ್ಟದಮನೆಯ ಸೇತುವೆಯಲ್ಲಿ ಕಂದಕ ನಿರ್ಮಾಣವಾಗಿದ್ದು, ಮೂಡಿಗೆರೆ- ಸಕಲೇಶಪುರ ಸಂಪರ್ಕ ಕಡಿತವಾಗುವ ಭೀತಿ ಎದುರಾಗಿದೆ.
ಸ್ವಾತಂತ್ರ್ಯ ಪೂರ್ವದಲ್ಲಿ ಹೇಮಾವತಿ ನದಿಗೆ ಬೆಟ್ಟದಮನೆ ಗ್ರಾಮದ ಬಳಿ ಸೇತುವೆ ನಿರ್ಮಿಸಲಾಗಿತ್ತು. ಗುರುವಾರ ಬೆಳಿಗ್ಗೆ ಸೇತುವೆಯ ಒಂದು ಭಾಗದಲ್ಲಿ ಕಂದಕ ನಿರ್ಮಾಣವಾಗಿದ್ದು, ಭಾರಿ ವಾಹನಗಳು ಸಾಗಲು ಅಡ್ಡಿಯಾಗಿದೆ. ಪಕ್ಕದಲ್ಲಿ ನೂತನ ಸೇತುವೆ ನಿರ್ಮಿಸುತ್ತಿದ್ದು, ಕಾಮಗಾರಿ ಅಪೂರ್ಣವಾಗಿದೆ. ಸವಾರರು ಜೀವ ಬಿಗಿ ಹಿಡಿದುಕೊಂಡು ಸಾಗುತ್ತಿದ್ದಾರೆ. ಎಂಜಿನಿಯರ್ ಪರಿಶೀಲನೆ ನಡೆಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.