ADVERTISEMENT

ನರಸಿಂಹರಾಜಪುರ | ಪತ್ನಿ ಮೇಲೆ ಕತ್ತಿಯಿಂದ ಹಲ್ಲೆ: ಪತಿ ಬಂಧನ

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2024, 13:29 IST
Last Updated 10 ಸೆಪ್ಟೆಂಬರ್ 2024, 13:29 IST
<div class="paragraphs"><p>ಬಂಧನ </p></div>

ಬಂಧನ

   

(ಸಾಂದರ್ಭಿಕ ಚಿತ್ರ)

ನರಸಿಂಹರಾಜಪುರ: ಪತ್ನಿಯ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ ಆರೋಪದ ಮೇಲೆ ಪತಿ, ಪಟ್ಟಣದ ಪ್ರವಾಸಿ ಮಂದಿರ ಸಮೀಪದ ನಿವಾಸಿ ಚಂದ್ರು ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.

ADVERTISEMENT

ಪತಿ–ಪತ್ನಿ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು. ಹಿಂದೆಯೂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಭಾನುವಾರ ರಾತ್ರಿ ಚಂದ್ರು ಪತ್ನಿ ಸವಿತಾ (35) ಜತೆಗೆ ಜಗಳವಾಡಿ ಮಚ್ಚಿನಿಂದ ತಲೆ, ಕಿವಿ, ಹೊಟ್ಟೆ ಹಾಗೂ ಎದೆ ಭಾಗಕ್ಕೆ ಹಲ್ಲೆ ಮಾಡಿದ್ದಾನೆ. ಗಂಭಿರವಾಗಿ ಗಾಯಗೊಂಡ ಸವಿತಾ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸವಿತಾ ಅವರ ತಂದೆ ವಿಜಯ್ ಎಂಬುವರು ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.