ಸಾಂದರ್ಭಿಕ ಚಿತ್ರ
(ಎಐ ಚಿತ್ರ)
ಬಾಳೆಹೊನ್ನೂರು(ಚಿಕ್ಕಮಗಳೂರು): ಕಾಡಾನೆ ತುಳಿದು ದಾವಣೆಗೆರೆ ಜಿಲ್ಲೆಯ ಕಾರ್ಮಿಕ ಮಹಿಳೆ ಮೃತಪಟ್ಟಿದ್ದಾರೆ.
ಹೊನ್ನಾಳಿ ತಾಲ್ಲೂಕಿನ ವಟ್ಟಪುರ ಸಾಸ್ವೆಹಳ್ಳಿಯ ಹಾಲೇಶ್ ಎಂಬುವರ ಪತ್ನಿ ಅನಿತಾ(25) ಮೃತರು. ಬಾಳೆಹೊನ್ನೂರು ಸಮೀಪದ ಬನ್ನೂರು ಗ್ರಾಮದ ಶಶಿಶೇಖರ್ ಎಂಬವರ ಕಾಫಿ ತೋಟದ ಕೆಲಸಕ್ಕೆಂದು ಬಂದಿದ್ದರು. ಕಾರ್ಮಿಕರ ಲೈನ್ ಮನೆಗೆ ಹೋಗುವ ದಾರಿಯಲ್ಲಿ ಕಾಡಾನೆ ಎದುರಾಗಿ ತುಳಿದಿದೆ.
ತೀವ್ರವಾಗಿ ಗಾಯಗೊಂಡಿದ್ದ ಅನಿತಾ ಅವರನ್ನು ಶಿವಮೊಗ್ಗ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯ ಮೃತಪಟ್ಟಿದ್ದಾರೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.