ADVERTISEMENT

ಸಿದ್ದರಾಮಯ್ಯ ಜತೆ ಸೆಲ್ಫಿಗಾಗಿ ಭಾಷಣ ಮುಗಿಯುವವರೆಗೂ ಕಾದು ನಿಂತ ಯುವತಿ!

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2022, 11:33 IST
Last Updated 16 ಏಪ್ರಿಲ್ 2022, 11:33 IST
ಸಿದ್ದರಾಮಯ್ಯ ಜತೆ ಸೆಲ್ಫಿ ತೆಗೆದುಕೊಳ್ಳಲು ಬಂದ ಯುವತಿಯನ್ನು ತಡೆದ ಪೊಲೀಸರು
ಸಿದ್ದರಾಮಯ್ಯ ಜತೆ ಸೆಲ್ಫಿ ತೆಗೆದುಕೊಳ್ಳಲು ಬಂದ ಯುವತಿಯನ್ನು ತಡೆದ ಪೊಲೀಸರು   

ಚಿಕ್ಕಮಗಳೂರು: ಸಂತೋಷ್‌ ಪಾಟೀಲ್‌ ಆತ್ಯಹತ್ಯೆ ಪ್ರಕರಣದ ಆರೋಪಿ ಕೆ.ಎಸ್‌.ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ನಗರದ ಆಜಾದ್‌ ಪಾರ್ಕ್ ವೃತ್ತದಲ್ಲಿ ಕಾಂಗ್ರೆಸ್‌ ವತಿಯಿಂದ ಸಭೆ ಏರ್ಪಡಿಸಲಾಗಿತ್ತು.

ವೇದಿಕೆಯಲ್ಲಿ ಭಾಷಣ ಮಾಡುತ್ತಿದ್ದ ಸಿದ್ದರಾಮಯ್ಯ ಅವರು,‘ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಯಹತ್ಯೆ ಪ್ರಕರಣದಲ್ಲಿಈಶ್ವರಪ್ಪ ಅವರನ್ನು ಬಂಧಿಸಬೇಕು. ಅವರನ್ನು ಬಂಧಿಸದಿದ್ದರೆ ಸಾಕ್ಷ್ಯ ನಾಶ ಮಾಡುವ ಸಾಧ್ಯತೆ ಇದೆ’ ಎಂದುಹೇಳಿದರು.

ಭಾಷಣ ಮುಂದುವರಿದಿತ್ತು. ಈ ವೇಳೆ ವೇದಿಕೆ ಬಳಿಗೆ ಬಂದ ಯುವತಿಯೊಬ್ಬರು, ‘ನಾನು ನಿಮ್ಮ ಅಭಿಮಾನಿ, ನಿಮ್ಮ ಜತೆ ಸೆಲ್ಫಿ ತೆಗೆಸಿಕೊಳ್ಳಬೇಕು’ ಎಂದು ಸಿದ್ದರಾಮಯ್ಯ ಅವರಲ್ಲಿಬೇಡಿಕೆ ಇಟ್ಟರು. ಅಷ್ಟಲ್ಲದೆ, ಭಾಷಣ ಮುಗಿಯವವರೆಗೂ ಅಲ್ಲಿಯೇ ಕಾದು ನಿಂತಿದ್ದರು.

ಪೊಲೀಸರು ಯವತಿಯ ಬ್ಯಾಗು ಎಲ್ಲವನ್ನು ಪರಿಶೀಲಿಸಿದರು. ಆದಾಗ್ಯೂ, ಫೋಟೊ ತೆಗೆಸಿಕೊಳ್ಳಲು ಅವಕಾಶ ಸಿಗಲಿಲ್ಲ. ಆಗ ಯುವತಿ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.