ADVERTISEMENT

ಆಯೋಗದ ಅಧ್ಯಕ್ಷರಿಂದ ನೀತಿ ಸಂಹಿತೆ ಉಲ್ಲಂಘನೆ

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2019, 17:54 IST
Last Updated 17 ಮಾರ್ಚ್ 2019, 17:54 IST
ಚಳ್ಳಕೆರೆ ನಗರದಲ್ಲಿ ಭಾನುವಾರ ವೀರಶೈವ ಕಲ್ಯಾಣ ಮಂಟಪದಲ್ಲಿ ಬಳಿ ನಿಂತಿದ್ದ ಕರ್ನಾಟಕ ಹಿಂದುಳಿದ ವರ್ಗಗಳ ರಾಜ್ಯ ಅಧ್ಯಕ್ಷರ ಸರ್ಕಾರಿ ವಾಹನ
ಚಳ್ಳಕೆರೆ ನಗರದಲ್ಲಿ ಭಾನುವಾರ ವೀರಶೈವ ಕಲ್ಯಾಣ ಮಂಟಪದಲ್ಲಿ ಬಳಿ ನಿಂತಿದ್ದ ಕರ್ನಾಟಕ ಹಿಂದುಳಿದ ವರ್ಗಗಳ ರಾಜ್ಯ ಅಧ್ಯಕ್ಷರ ಸರ್ಕಾರಿ ವಾಹನ   

ಚಳ್ಳಕೆರೆ: ಭಾನುವಾರ ನಡೆದ ವಿವಾಹಕ್ಕೆ ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ರಾಜ್ಯ ಅಧ್ಯಕ್ಷ ಕಾಂತರಾಜ ಹಾಗೂ ಕುಟುಂಬದವರು ಸರ್ಕಾರಿ ವಾಹನದಲ್ಲಿ ಬಂದಿದ್ದಾಗ ಚುನಾವಣಾಧಿಕಾರಿಗಳ ತಂಡ ಅದನ್ನು ವಶಪಡಿಸಿಕೊಂಡಿದೆ.

ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಸರ್ಕಾರಿ ವಾಹನದಲ್ಲಿ ಬಂದಿದ್ದ ವೇಳೆ ಸರ್ಕಾರಿ ನಾಮಫಲಕ ನೋಡಿದ ನಾಗರಿಕರೊಬ್ಬರು ತಾಲ್ಲೂಕು ಕಚೇರಿಗೆ ದೂರವಾಣಿ ಕರೆ ಮಾಡಿ, ಮಾಹಿತಿ ನೀಡಿದರು. ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿದ ಚುನಾವಣಾ ಅಧಿಕಾರಿಗಳ ತಂಡ ತಪಾಸಣೆ ನಡೆಸಿ ವಾಹನವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT