ಚಳ್ಳಕೆರೆ: ಭಾನುವಾರ ನಡೆದ ವಿವಾಹಕ್ಕೆ ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ರಾಜ್ಯ ಅಧ್ಯಕ್ಷ ಕಾಂತರಾಜ ಹಾಗೂ ಕುಟುಂಬದವರು ಸರ್ಕಾರಿ ವಾಹನದಲ್ಲಿ ಬಂದಿದ್ದಾಗ ಚುನಾವಣಾಧಿಕಾರಿಗಳ ತಂಡ ಅದನ್ನು ವಶಪಡಿಸಿಕೊಂಡಿದೆ.
ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಸರ್ಕಾರಿ ವಾಹನದಲ್ಲಿ ಬಂದಿದ್ದ ವೇಳೆ ಸರ್ಕಾರಿ ನಾಮಫಲಕ ನೋಡಿದ ನಾಗರಿಕರೊಬ್ಬರು ತಾಲ್ಲೂಕು ಕಚೇರಿಗೆ ದೂರವಾಣಿ ಕರೆ ಮಾಡಿ, ಮಾಹಿತಿ ನೀಡಿದರು. ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿದ ಚುನಾವಣಾ ಅಧಿಕಾರಿಗಳ ತಂಡ ತಪಾಸಣೆ ನಡೆಸಿ ವಾಹನವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.