ಚಿತ್ರದುರ್ಗ: ಹೊಸದುರ್ಗ ಸಮಾಜ ಕಲ್ಯಾಣ ಇಲಾಖೆಗೆ ಮಂಜೂರು ಮಾಡಬೇಕೆಂದಿದ್ದ ಕಡತವನ್ನು ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಈಚೆಗೆ ಕಳವು ಮಾಡಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಹೊಸದುರ್ಗ ತಾಲ್ಲೂಕಿನ ಗೊರವಿನಕಲ್ಲು ಗ್ರಾಮದ ಸರ್ವೆ ನಂಬರ್ 86ರ ಜಮೀನಿನಲ್ಲಿ 8 ಎಕರೆ 20 ಗುಂಟೆ ಜಮೀನನ್ನು ಇಲಾಖೆಗೆ ಮಂಜೂರಾಗಿತ್ತು ಎನ್ನಲಾಗಿದೆ.
ಈ ಕಡತವೂ ಕಚೇರಿಯಲ್ಲಿ ಎಷ್ಟು ಹುಡುಕಿದರೂ ಸಿಕ್ಕಿರಲಿಲ್ಲ. ಕಚೇರಿಯಲ್ಲಿದ್ದ ಸಿಸಿಟಿವಿ ಕ್ಯಾಮೆರಾದ ಸೆರೆಯಾದ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಕಡತವನ್ನು ಕಿಡಿಗೇಡಿಯೊಬ್ಬ ಕಳವು ಮಾಡುತ್ತಿರುವುದು ಗೊತ್ತಾಗಿದೆ.
ಈ ಸಂಬಂಧ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.