ADVERTISEMENT

ಪಟೇಲ್ ತಿಪ್ಪೇಸ್ವಾಮಿ ನಾಮಪತ್ರ ಸಲ್ಲಿಕೆ ನಾಳೆ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2018, 8:12 IST
Last Updated 23 ಏಪ್ರಿಲ್ 2018, 8:12 IST

ನಾಯಕನಹಟ್ಟಿ: ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಧಿಕೃತ ಅಭ್ಯರ್ಥಿಯಾಗಿ ಏ.24ರಂದು ನಾಮಪತ್ರ ಸಲ್ಲಿಸಲಾಗುವುದು ಎಂದು ಜೆಡಿಎಸ್ ಅಭ್ಯರ್ಥಿ ಪಟೇಲ್ ಜಿ.ಎಂ. ತಿಪ್ಪೇಸ್ವಾಮಿ ಹೇಳಿದರು.

ಪಟ್ಟಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ಜೆಡಿಎಸ್ ಪಕ್ಷದಿಂದ ಈಗಾಗಲೇ ಕಳೆದ ಶುಕ್ರವಾರ ಅನೌಪಚಾರಿಕವಾಗಿ ನಾಮಪತ್ರ ಸಲ್ಲಿಸಲಾಗಿದೆ. ಏ. 24 ರಂದು ಸಾವಿರಾರು ಕಾರ್ಯಕರ್ತರು, ಅಭಿಮಾನಿಗಳೊಂದಿಗೆ ರೋಡ್ ಷೋ ನಡೆಸಿ ನಾಮಪತ್ರ ಸಲ್ಲಿಸಲಾಗುವುದು ಎಂದರು.

2013ರ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್ಆರ್ ಪಕ್ಷದಿಂದ ನನಗೆ ಟಿಕೆಟ್ ನೀಡುವುದಾಗಿ ನಂಬಿಸಿದ್ದರು. ಕೊನೆ ಗಳಿಗೆಯಲ್ಲಿ ಶ್ರೀರಾಮುಲು‌ ಹಾಗೂ ಜನಾರ್ದನ ರೆಡ್ಡಿ ಅವರಿಂದಾಗಿ ಟಿಕೆಟ್ ಕೈ ತಪ್ಪಿತು. ಈ ಬಾರಿ ಕ್ಷೇತ್ರದ ಜನತೆ ಜೆಡಿಎಸ್‌ಗೆ ವ್ಯಾಪಕ ಬೆಂಬಲ ವ್ಯಕ್ತಪಡಿಸುತ್ತಿದ್ದು ಈ ಬಾರಿಯ ಚುನಾವಣೆಯಲ್ಲಿ ಗೆಲುವು‌‌ ಸಾಧಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ADVERTISEMENT

ಮುಖಂಡ ಎಸ್. ಓಬಣ್ಣ ಮಾತನಾಡಿ, ‘ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ರೈತಪರ ಜನಪರ ಆಡಳಿತ ನೀಡಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರ ಚುಕ್ಕಾಣಿ ಹಿಡಿಯುವುದು ಖಚಿತ ಹಾಗಾಗಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪಟೇಲ್ ಜಿ.ಎಂ.ತಿಪ್ಪೇಸ್ವಾಮಿ ಅವರನ್ನು ಬೆಂಬಲಿಸಬೇಕು’ ಎಂದು ಮನವಿ ಮಾಡಿದರು.

ಮುಖಂಡರಾದ ಘಟ್ಟಪರ್ತಿ ಚಂದ್ರಣ್ಣ, ಮೈಲಹಳ್ಳಿ ತಿಮ್ಮಣ್ಣ ಮಾತನಾಡಿದರು. ಗೋವಿಂದೇಗೌಡ, ಚಂದ್ರಣ್ಣ, ಮಂದಲರ ನಾಗರಾಜ್, ಆರ್.ತಿಪ್ಪೇಸ್ವಾಮಿ, ನರಸಿಂಹಮೂರ್ತಿ, ಅಜ್ಜಪ್ಪ, ಜಯಣ್ಣ,ಜಾಕೀರ್, ಹೇಮಣ್ಣ, ಸಣ್ಣಪಾಲಯ್ಯ ಇದ್ದರು.

ಸ್ಟಾರ್ ಪ್ರಚಾರಕರು ಭಾಗಿ

ಏ.24 ರಂದು ನಾಮಪತ್ರ ಸಲ್ಲಿಸುವ ವೇಳೆ ಮೊಳಕಾಲ್ಮುರಿಗೆ ನಟ ನಿಖಿಲ್ ಗೌಡ, ಹೊಸದುರ್ಗ ಜೆಡಿಎಸ್ ಅಭ್ಯರ್ಥಿ ಶಶಿಕುಮಾರ್, ನಟಿಯರಾದ ಅಮೂಲ್ಯ, ಪೂಜಾ ಗಾಂಧಿ, ಸಂಗೀತ‌ ನಿರ್ದೇಶಕ ಗುರುಕಿರಣ್, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಆಗಮಿಸಲಿದ್ದಾರೆ ಪಟೇಲ್ ಜಿ.ಎಂ. ತಿಪ್ಪೇಸ್ವಾಮಿ‌ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.